ಕಲಬುರಗಿ:ಕ್ಷುಲ್ಲಕ ಕಾರಣಕ್ಕೆ ಫೈರಿಂಗ್ ನಡೆದಿದ್ದು, ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲಬುರಗಿ ನಗರದ ಗಂಜ್ ಪ್ರದೇಶದ ಮಹಾಲಕ್ಷ್ಮಿ ಲೇಔಟ್ನಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಯ ವಿವರ:ಮಹಾಲಕ್ಷ್ಮಿ ಲೇಟೌಟ್ನಲ್ಲಿ ಲಿಂಗರಾಜು ಎಂಬವರಿಗೆ ಸೇರಿದ ನಾಲ್ಕಂತಸ್ತಿನ ಕಟ್ಟಡದ 2ನೇ ಮಹಡಿಯಲ್ಲಿ ರಾತ್ರಿ ಗುಂಡಿನ ಸದ್ದು ಕೇಳಿದೆ. KA-39 A-3333 ನೋಂದಣಿಯ ಮಹೀಂದ್ರ ಸ್ಕಾರ್ಪಿಯೋ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಕಟ್ಟಡದ 2ನೇ ಮಹಡಿಗೆ ಹೋಗಿದ್ದಾನೆ. ಇದನ್ನು ಗಮನಿಸಿದ ಅದೇ ಲೇಔಟ್ನ ಉಮೇಶ್ ಯಳವಂತಗಿ ಎಂಬಾತ ಆ ವ್ಯಕ್ತಿಯನ್ನು ತಡೆದು ಯಾರು ನೀನು?, ಇಷ್ಟು ಹೊತ್ತಿಗೆ ಇಲ್ಲಿಗೇಕೆ ಬಂದೆ ಎಂಬುದಾಗಿ ಪ್ರಶ್ನಿಸಿದ್ದಾರೆ. ಈ ವಿಚಾರಕ್ಕೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆರೋಪಿ ಪಿಸ್ತೂಲ್ ತೆಗೆದು ಉಮೇಶ್ ಮೇಲೆ ಫೈರ್ ಮಾಡಿದ್ದಾನೆ. ತಕ್ಷಣ ಉಮೇಶ್ ಸ್ಥಳದಿಂದ ಓಡಿ ಹೋಗಿದ್ದು, ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ:ಕೊಡಗಿನಲ್ಲಿ ಮತ್ತೆ ಗುಂಡಿನ ಸದ್ದು: ನಿವೃತ್ತ ಎಸ್ಪಿ ಪುತ್ರನಿಂದ ವರ್ತಕನ ಮೇಲೆ ಫೈರಿಂಗ್