ಕಲಬುರಗಿ: ಕತ್ತು ಹಿಸುಕಿ ವ್ಯಕ್ತಿಯ ಕೊಲೆಗೈದು ಆತನ ಶರ್ಟ್ನಿಂದಲೇ ಮುಖವನ್ನು ಸುಟ್ಟು ವಿಕಾರಗೊಳಿಸಿದ ಘಟನೆ ಅಫಜಲಪುರ ತಾಲೂಕಿನ ನಂದರ್ಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತ ವ್ಯಕ್ತಿ ಯಾರು? ಎನ್ನುವುದು ಇನ್ನೂ ಗೊತ್ತಾಗಿಲ್ಲ. ಅಂದಾಜು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಇದಾಗಿದ್ದು, ರಾತ್ರಿ ವೇಳೆ ಕೊಲೆಗೈದು ಬಳಿಕ ಆತನ ಶರ್ಟ್ ಮುಖದ ಮೇಲೆ ಹಾಕಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಇದೆ.
ಘಟನಾ ಸ್ಥಳಕ್ಕೆ ಅಫಜಲಪುರ ಪಿಎಸ್ಐ ಸಂತೋಷ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Intro:ಕಲಬುರಗಿ: ಕತ್ತುಹಿಸುಕಿ ವ್ಯಕ್ತಿಯ ಕೊಲೆ ಮಾಡಿ ಆತನ ಶರ್ಟ್ ನಿಂದಲೇ ಮುಖವನ್ನು ಸುಟ್ಟು ವಿಕಾರಗೊಳಿಸಿದ ಘಟನೆ ಅಫಜಲಪುರ ತಾಲೂಕಿನ ನಂದರ್ಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.Body:ಮೃತ ಯಾರು ಎನ್ನುವದು ಇನ್ನೂ ಪತ್ತೆಯಾಗಿಲ್ಲ, ಅಂದಾಜು 35ರಿಂದ 40 ವರ್ಷ ವಯಸ್ಸಿನ ವ್ಯಕ್ತಿ ಮೃತದೇಹ ಇದಾಗಿದ್ದು, ರಾತ್ರಿ ದುಷ್ಕರ್ಮಿಗಳು ಕೊಲೆಗೈದು ಬಳಿಕ ಆತನ ಶರ್ಟ್ ಮುಖದ ಮೇಲೆ ಹಾಕಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ನಂದರ್ಗಿ ಗ್ರಾಮದ ಹೊರವಲಯದಲ್ಲಿರುವ ಭೂತಾಳಿ ಸಿದ್ದೇಶ್ವರ ದೇವಸ್ಥಾನದ ಬಳಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಅಫಜಲಪುರ ಪಿಎಸ್ಐ ಸಂತೋಷ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮೃತನ ಬಗ್ಗೆ ಪತ್ತೆ ಹಚ್ಚಿ ನಂತರ ದುಷ್ಕರ್ಮಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ. ಈ ಕುರಿತು ಅಫಜಲಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ನಂದರ್ಗಿ ಗ್ರಾಮದ ಹೊರವಲಯದಲ್ಲಿರುವ ಭೂತಾಳಿ ಸಿದ್ದೇಶ್ವರ ದೇವಸ್ಥಾನದ ಬಳಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಅಫಜಲಪುರ ಪಿಎಸ್ಐ ಸಂತೋಷ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮೃತನ ಬಗ್ಗೆ ಪತ್ತೆ ಹಚ್ಚಿ ನಂತರ ದುಷ್ಕರ್ಮಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ. ಈ ಕುರಿತು ಅಫಜಲಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion: