ಕರ್ನಾಟಕ

karnataka

ಹುಲಿ ಸೆರೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯ: ಭಯದಲ್ಲೇ ಬದುಕುತ್ತಿರುವ ಕೊಡಗಿನ ಜನರು

By

Published : Sep 17, 2022, 10:15 PM IST

forest-department-try-to-capture-tiger-in-kodagu
ಭಯದಲ್ಲೇ ಬದುಕುತ್ತಿರುವ ಕೊಡಗಿನ ಜನರು ()

ಕೊಡಗಿನ ವಿರಾಜಪೇಟೆ ತಾಲೂಕಿನ ಸಿದ್ದಪುರದಲ್ಲಿ ಹುಲಿ ಉಪಟಳದ ಹೆಚ್ಚಾಗಿದ್ದು, ಮೂರ್ನಾಲ್ಕು ದಿನದಲ್ಲಿ ನಾಲ್ಕು ಹಸುಗಳನ್ನು ಬಲಿ ಪಡೆದಿದೆ. ಆದರೆ, ಹುಲಿ ಸೆರೆಗೆ ತಡವಾಗಿ ಬಂದಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಕೊಡಗು :ವನ್ಯ ಮೃಗಗಳು ಮತ್ತು ಮಾನವ ಸಂಘರ್ಷಕೊಡಗಿನಲ್ಲಿ ದಿನೇ ದಿನೆ ಹೆಚ್ಚಾಗುತ್ತಿದೆ. ಒಂದೆಡೆ ಕಾಡಾನೆ ದಾಳಿ ಮಾಡಿ ಬೆಳೆ ಹಾನಿ ಉಂಟು ಮಾಡಿದರೆ ಈಗ ಹುಲಿ ಕಾಟ ಶುರುವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಹುಲಿ ನಾಲ್ಕು ಹಸುಗಳನ್ನು ಬಲಿ ಪಡೆದಿದೆ. ಹೀಗಾಗಿ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ.

ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಪುರದಲ್ಲಿ ಹುಲಿ ಉಪಟಳದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಕ್ರಮ ಜರುಗಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಶಾಲೆಗೆ ಮಕ್ಕಳನ್ನು ಕಳುಹಿಸಲು ಭಯವಾಗುತ್ತಿದೆ. ತೋಟದ ಕೂಲಿ ಕೆಲಸಕ್ಕೆ ಬರಲು ಜನ ಒಪ್ಪುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ತೋರಿದ್ದಾರೆ. ನಾಲ್ಕು ಹಸುಗಳನ್ನು ಬಲಿ ಪಡೆಯುವವರಗೂ ಕ್ರಮ ಜರುಗಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಸ್ಥರ ಮನವಿಯ ನಂತರ ಹುಲಿ ಸೆರೆಗೆ ಅರಣ್ಯ ಇಲಾಖೆ ಬಲೆ ಬೀಸಿದ್ದು ಸಾಕನೆಗಳ ಸಹಾಯದಿಂದ ಕಾರ್ಯಾಚರಣೆಗೆ ಮುಂದಾಗಿದೆ. ಅರಣ್ಯ ಸಿಬ್ಬಂದಿ ಮತ್ತು ವೈದ್ಯರು ತಂಡ ಸ್ಥಳದಲ್ಲಿ ಬೀಡು ಬಿಟ್ಟಿದ್ದು ಹುಲಿ ಸೆರೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.‌

ಇದನ್ನೂ ಓದಿ :ನಾಯಿ ಬೊಗಳಿದ್ದಕ್ಕೆ ನಾಡ ಬಂದೂಕಿನಿಂದ ಗುಂಡಿಕ್ಕಿ ಕೊಂದ ಪಾಪಿ

ABOUT THE AUTHOR

...view details