ಬಂಗಾರಪೇಟೆ (ಕೋಲಾರ ಜಿಲ್ಲೆ): ಅಪಘಾತವೊಂದರಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಮೂಲಕ ಬಂಗಾರಪೇಟೆ ತಹಶೀಲ್ದಾರರು ಮಾನವೀಯತೆ ಮರೆದಿದ್ದಾರೆ.
ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಕಾಲಿಗೆ ಭಾರಿ ಗಾಯವಾಗಿ ರಕ್ತ ಸೋರುತ್ತಿತ್ತು. ಕಾಲಿನ ಮೇಲೆ ಟ್ರ್ಯಾಕ್ಟರ್ ಚಕ್ರ ಹರಿದು ಕಾಲಿಗೆ ಗಾಯವಾಗಿ ರಕ್ತದ ಮಡುವಿನಲ್ಲಿ ಆತ ನೋವಿನಿಂದ ನರಳಾಡುತ್ತಿದ್ದ. ಸ್ಥಳದಲ್ಲಿದ್ದವರು ಆಂಬ್ಯುಲೆನ್ಸ್ಗೆ ಕರೆ ಮಾಡಿ ಅರ್ಧ ಗಂಟೆ ಕಳೆದರೂ ಆಂಬ್ಯುಲೆನ್ಸ್ ಬಾರದೆ ವ್ಯಕ್ತಿ ನೋವು ತಡೆಯಲಾಗದೆ ಒದ್ದಾಡುತ್ತಿದ್ದ.