ಕರ್ನಾಟಕ

karnataka

ಕೊಪ್ಪಳ: ಪ್ರಮುಖ ದೇಗುಲಗಳು ಸೋಮವಾರದಿಂದ‌ ಭಕ್ತರಿಗೆ ಮುಕ್ತ

By

Published : Sep 26, 2021, 4:18 PM IST

ಕಳೆದ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಲ್ಲಿ ಶೇ.30 ಕ್ಕಿಂತ ಅಧಿಕ ಕೋವಿಡ್‌ ಪಾಸಿಟಿವಿಟಿ ದರವಿದ್ದ ಕೊಪ್ಪಳ ಜಿಲ್ಲೆಯಲ್ಲಿ ಈಗ ಪಾಸಿಟಿವಿಟಿ ದರ ಶೂನ್ಯಕ್ಕೆ ಕುಸಿದಿದೆ.

Koppal
ಭಕ್ತರ ದರ್ಶನಕ್ಕೆ ನಿರ್ಬಂಧವಿದ್ದ ಪ್ರಮುಖ ದೇವಸ್ಥಾನಗಳು ಸೋಮವಾರದಿಂದ‌ ಮುಕ್ತ

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಗ್ಗಿದ್ದು ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ ವಿಧಿಸಿದ್ದ ದೇವಸ್ಥಾನಗಳು ಭಕ್ತರಿಗೆ ಮುಕ್ತಗೊಳ್ಳುತ್ತಿವೆ. ಸೋಮವಾರದಿಂದ ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ

ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೂನ್ಯಕ್ಕಿಳಿದಿದೆ. ಜಿಲ್ಲೆಯಲ್ಲೀಗ ಕೇವಲ ಮೂರು ಜನ ಮಾತ್ರ ಕೊರೊನಾ ಸೋಂಕಿತರಿದ್ದಾರೆ. ಕೊರೊನಾ ಸೋಂಕು ಕಡಿಮೆಯಾಗಿದ್ದು ಪ್ರಮುಖ ಧಾರ್ಮಿಕ ಯಾತ್ರಾ ಸ್ಥಳಗಳಾದ ತಾಲೂಕಿನ ಹುಲಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನ, ಗಂಗಾವತಿ ತಾಲೂಕಿನ ಅಂಜನಾದ್ರಿ ಹಾಗೂ ಕನಕಗಿರಿಯ ಶ್ರೀ ಕನಕಾಚಲ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕೆ ಹೇರಲಾಗಿದ್ದ ನಿರ್ಬಂಧ ಹಿಂಪಡೆಯಲಾಗಿದೆ ಎಂದರು.

ABOUT THE AUTHOR

...view details