ಕರ್ನಾಟಕ

karnataka

ಮಂಡ್ಯದಲ್ಲಿ ಮೂವರು ಅರ್ಚಕರ ಕೊಲೆ ಪ್ರಕರಣ: ಪೊಲೀಸರಿಂದ ಗುಂಡಿನ ದಾಳಿ, ಆರೋಪಿಗಳ ಬಂಧನ

By

Published : Sep 14, 2020, 9:03 AM IST

Updated : Sep 14, 2020, 10:12 AM IST

ಮಂಡ್ಯದಲ್ಲಿ ಮೂವರು ಅರ್ಚಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಥಳ ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಸ್ಥಳ ಪರಿಶೀಲನೆ ನಡೆಸುತ್ತಿರುವ ಪೊಲೀಸರು

ಮಂಡ್ಯ: ಮೂವರು ಅರ್ಚಕರ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ಮೇಲೆ ಗುಂಡಿನ ದಾಳಿ ಮಾಡಿರುವ ಪೊಲೀಸರು, ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ಘಟನೆಯಲ್ಲಿ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳ ಪರಿಶೀಲನೆ ನಡೆಸುತ್ತಿರುವ ಪೊಲೀಸರು

ಕಳೆದ ರಾತ್ರಿ ಖಚಿತ ಮಾಹಿತಿ ಮೇರೆಗೆ ಪೂರ್ವ ಠಾಣೆ ಪಿಎಸ್‌ಐ ಶರತ್ ಹಾಗೂ ಸಿಬ್ಬಂದಿ ಕೃಷ್ಣೇಗೌಡ, ಅನಿಲ್ ಅವರ ತಂಡ ದಾಳಿ ಮಾಡಿದಾಗ ದರೋಡೆಕೋರರ ತಂಡ ಪ್ರತಿದಾಳಿ ಮಾಡಿದೆ. ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ಮಾಡಿ ಆರೋಪಿಗಳಾದ ಆಂಧ್ರ ಮೂಲದ ವಿಜಿ(26), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ(28) ಹಾಗೂ ತೊಪ್ಪನಹಳ್ಳಿಯ ಮಂಜು(31) ಎಂಬುವರನ್ನು ಬಂಧಿಸಿದ್ದಾರೆ.

ಇದನ್ನು ಓದಿ:ಹುಂಡಿ ಕದಿಯಲು ಬಂದವರಿಂದ ಮೂವರು ಅರ್ಚಕರ ಬರ್ಬರ ಹತ್ಯೆ... ಬೆಚ್ಚಿಬಿದ್ದ ಮಂಡ್ಯ ಜನತೆ!

ಮದ್ದೂರು ತಾಲೂಕಿನ ಸಾದೊಳಲು ಗ್ರಾಮದ ಬಳಿ ಕಾರ್ಯಾಚರಣೆ ಮಾಡುವಾಗ ಘಟನೆ ನಡೆದಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಗೆ ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳಿಗೆ ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Last Updated :Sep 14, 2020, 10:12 AM IST

ABOUT THE AUTHOR

...view details