ಕರ್ನಾಟಕ

karnataka

ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು ಆರೋಪ: ಆಸ್ಪತ್ರೆ ಮುಂಭಾಗ ಶವ ಇಟ್ಟು ಪ್ರತಿಭಟನೆ

By

Published : Aug 12, 2021, 12:42 PM IST

ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಮಂಡ್ಯದ ವಿವಿ ಫಾರಂ ಬಳಿಯ ಆಸ್ಪತ್ರೆ ಮುಂಭಾಗ ಶವ ಇಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ
ಪ್ರತಿಭಟನೆ

ಮಂಡ್ಯ: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆ ಮುಂಭಾಗ ಶವ ಇಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂಡ್ಯದ ವಿವಿ ಫಾರಂ ಬಳಿ ತಡರಾತ್ರಿ ನಡೆದಿದೆ.

ಆಸ್ಪತ್ರೆ ಮುಂಭಾಗ ಶವ ಇಟ್ಟು ಪ್ರತಿಭಟನೆ

ಚಂದಗಾಲು ಗ್ರಾಮದ ನಿಶಾಂತ್ (17) ಮೃತ ಬಾಲಕ. ಕಳೆದ 2 ದಿನಗಳ ಹಿಂದೆ ಜ್ವರ ಬಂದ ಕಾರಣ ಶಿವಳ್ಳಿಯ ಖಾಸಗಿ ಕ್ಲಿನಿಕ್ ವೈದ್ಯರೊಬ್ಬರ ಬಳಿ ನಿಶಾಂತ್ ಚುಚ್ಚುಮದ್ದು ಪಡೆದಿದ್ದಾನೆ. ಬಳಿಕ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್​ಎಸ್​ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ.

ಹೀಗಾಗಿ ಖಾಸಗಿ ಆಸ್ಪತ್ರೆ ವೈದ್ಯನ ನಿರ್ಲಕ್ಷ್ಯದಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಕ್ಲಿನಿಕ್ ಮುಂದೆ ಶವ ಇಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕುಟುಂಬಸ್ಥರ ಮನವೊಲಿಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಈ ಕುರಿತು ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details