ಕರ್ನಾಟಕ

karnataka

ಮಂಡ್ಯದಲ್ಲಿ ಕೈಯಲ್ಲಿ ಗನ್​ ಹಿಡಿದು ದರೋಡೆಗೆ ಯತ್ನ.. ಯುವಕರನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು

By

Published : Sep 15, 2022, 12:57 PM IST

villagers captured the group trying to rob  group trying to rob with gun  Villagers beat to robbers in Mandya  ಮಂಡ್ಯದಲ್ಲಿ ಕೈಯಲ್ಲಿ ಗನ್​ ಹಿಡಿದು ಯುವಕರು ದರೋಡೆಗೆ ಯತ್ನ  ರಾಬರಿಗೆ ಯತ್ನಿಸುತ್ತಿದ್ದ ಯುವಕರ ಗುಂಪು  ಗನ್ ಹಿಡಿದು ರಸ್ತೆಯಲ್ಲಿ ದರೋಡೆ ಮಾಡಲು ಹೊಂಚು  ಕೈಯಲ್ಲಿ ಗನ್ ಹಿಡಿದು ಕಾರೊಂದನ್ನು ಅಡ್ಡಗಟ್ಟಿ ದರೋಡೆ  ಆರೋಪಿಗಳ ಗುಂಪಿನ ಮೇಲೆ ದಾಳಿ

ರಸ್ತೆ ಬದಿಯಲ್ಲಿ ಗನ್​ ಹಿಡಿದು ನಿಂತು.. ಕಾರಿನಲ್ಲಿ ಬರುತ್ತಿದ್ದವರನ್ನು ಅಡ್ಡ ಹಾಕಿ.. ರಾಬರಿಗೆ ಯತ್ನಿಸುತ್ತಿದ್ದ ಯುವಕರ ಗುಂಪು ಅನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ:ಗನ್ ಹಿಡಿದು ರಸ್ತೆಯಲ್ಲಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದವರನ್ನು ಗ್ರಾಮಸ್ಥರೇ ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಪಾಂಡವಪುರ ತಾಲೂಕಿನ ಬನ್ನಘಟ್ಟದಲ್ಲಿ ನಡೆದಿದೆ.

ಕಾರಿನಲ್ಲಿ ಬಂದಿದ್ದ ನಾಲ್ಕು ಮಂದಿ ಆಗಂತುಕರು ಕೈಯಲ್ಲಿ ಗನ್ ಹಿಡಿದು ಕಾರೊಂದನ್ನು ಅಡ್ಡಗಟ್ಟಿ ದರೋಡೆಗೆ ಯತ್ನಿಸುತ್ತಿದ್ದರು. ಕಾರಿನ ಚಾಲಕ ಕಿರುಚಿತ್ತಿದ್ದಂತೆ ಎಚ್ಚೆತ್ತ ಗ್ರಾಮಸ್ಥರು ಆರೋಪಿಗಳ ಗುಂಪಿನ ಮೇಲೆ ದಾಳಿ ಮಾಡಿ ಹಿಡಿದಿದ್ದಾರೆ. ಆದರೆ ಇದರಲ್ಲಿ ಇಬ್ಬರು ಮಾತ್ರ ಗ್ರಾಮಸ್ಥರ ಕೈ ಸಿಕ್ಕಿಬಿದ್ದಿದ್ದು, ಇನ್ನಿಬ್ಬರು ಪರಾರಿ ಆಗಿದ್ದಾರೆ.

ಮಂಡ್ಯದಲ್ಲಿ ಕೈಯಲ್ಲಿ ಗನ್​ ಹಿಡಿದು ಯುವಕರು ದರೋಡೆಗೆ ಯತ್ನ

ಸಿಕ್ಕಿಬಿದ್ದಿರುವ ಆರೋಪಿಗಳನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಪಾಂಡವಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗನ್​ ಮತ್ತು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಪರಾರಿಯಾಗಿರುವ ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಘಟನೆ ಕುರಿತು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಓದಿ:ಹಾಡಹಗಲೇ ಫೈನಾನ್ಸ್​ ಕಂಪನಿ ದರೋಡೆ ಯತ್ನ.. ಗುಂಡಿನ ದಾಳಿಯಲ್ಲಿ ಓರ್ವ ಕಳ್ಳ ಹತ

ABOUT THE AUTHOR

...view details