ಕರ್ನಾಟಕ

karnataka

ಮೈಸೂರಲ್ಲಿ 4 ವರ್ಷದ ಕರುಳ ಕುಡಿಯನ್ನೇ ಕೊಚ್ಚಿಹಾಕಿದ ಮಾನಸಿಕ ಅಸ್ವಸ್ಥ ತಾಯಿ!

By

Published : Jan 10, 2022, 6:40 PM IST

Updated : Jan 10, 2022, 6:55 PM IST

A Mentally ill motherr killed her son in Mysore

ಮಾನಸಿಕ ಅಸ್ವಸ್ಥ ತಾಯಿಯೊಬ್ಬಳು ಮಚ್ಚಿನಿಂದ ಮಗುವಿನ ತಲೆ ಭಾಗಕ್ಕೆ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ. ಘಟನೆಯು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಈಕೆ ತನ್ನ ಮೈಮೇಲೆ ದೇವರು ಬರುತ್ತದೆ ಎಂದು ಹೇಳುತ್ತಿದ್ದಳಂತೆ.

ಮೈಸೂರು: ಮಾನಸಿಕ ಅಸ್ವಸ್ಥೆಯೋರ್ವಳು ತನ್ನ 4 ವರ್ಷದ ಮಗನನ್ನೇ ಮಚ್ಚಿನಿಂದ ಮನಬಂದತೆ ಕೊಚ್ಚಿ ಕೊಲೆ ಮಾಡಿರುವ ಭೀಭತ್ಸ ಘಟನೆಯೊಂದು ಜಿಲ್ಲೆಯ ಹೆಚ್​ ​ಡಿ ಕೋಟೆ ತಾಲೂಕಿನ ಬೂದುನೂರು ಗ್ರಾಮದಲ್ಲಿ ನಡೆದಿದೆ.

ಶ್ರೀನಿವಾಸ ತನ್ನ ತಾಯಿಯಿಂದ ಭೀಕರವಾಗಿ ಕೊಲೆಗೀಡಾದ ಮೃತ ಬಾಲಕ ಎಂದು ತಿಳಿದುಬಂದಿದೆ. ಘಟನೆಯು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಬೂದುನೂರು ಗ್ರಾಮದ ಶಂಕರ್ ಯಡೆತೊರೆ ಗ್ರಾಮದ ಭವಾನಿಯನ್ನು ಮದುವೆಯಾಗಿದ್ದು ದಂಪತಿಗೆ 4 ವರ್ಷದ ಮಗ ಇದ್ದ. ಈಕೆ ತನ್ನ ಮೈಮೇಲೆ ದೇವರು ಬರುತ್ತದೆ ಎಂದು ಹೇಳುತ್ತಿದ್ದು, ಮಾನಸಿಕ ಅಸ್ವಸ್ಥವಾಗಿದ್ದಳು ಎಂದು ತಿಳಿದುಬಂದಿದೆ. ಇದರಿಂದ ಗಂಡನನ್ನ ಬಿಟ್ಟು ಮಗನೊಂದಿಗೆ ತವರು ಮನೆ ಸೇರಿದ್ದಳು.

ಕಳೆದ 15 ದಿನಗಳ ಹಿಂದೆ ಪತಿಯೇ ಹೋಗಿ ಪತ್ನಿ ಮತ್ತು ಮಗನನ್ನ ಬೂದುನೂರಿಗೆ ಕರೆದುಕೊಂಡು ಬಂದಿದ್ದ. ಆದರೆ, ನಿನ್ನೆ ರಾತ್ರಿ ಕೆಲಸ ನಿಮಿತ್ತ ಹೊರಗಡೆ ಹೋದಾಗ ಅಸ್ವಸ್ಥ ತಾಯಿ ತನ್ನ 4 ವರ್ಷದ ಮಗನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾಳೆ. ಇದರಿಂದ ಬಾಲಕನ ತಲೆ ಭಾಗ ಸಂಪೂರ್ಣವಾಗಿ ರಕ್ತಸಿಕ್ತವಾಗಿತ್ತು.

ಮನೆಗೆ ಬಂದು ನೋಡಿದ ಶಂಕರ್ ಗಾಬರಿಯಾಗಿ ಗ್ರಾಮಸ್ಥರ ಸಹಾಯದಿಂದ ಹೆಚ್ ಡಿ ಕೋಟೆ ಆಸ್ಪತ್ರೆಗೆ ಕರೆ ತಂದಿದ್ದನು. ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನ ಮೈಸೂರಿಗೆ ಕರೆದುಕೊಂಡಿದ್ದು ಬಂದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.

ಈ ಸಂಬಂಧ ಹೆಚ್ ಡಿ ಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಮಾನಸಿನ ಅಸ್ವಸ್ಥೆ ಭವಾನಿ ಬಂಧನಕ್ಕಾಗಿ ಸಿಬ್ಬಂದಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ: 'ನಾನು ಯಾವ ಟೆಸ್ಟೂ ಕೊಡೋದಿಲ್ಲ, ಫಿಟ್‌&ಫೈನ್ ಆಗಿದ್ದೀನಿ, ಬೇಕಾದ್ರೆ ನಿಮ್ಮ ಹೋಂ ಮಿನಿಸ್ಟರ್‌ನ ಕಳ್ಸಿ ಹೊತ್ಕೊಂಡು ಹೋಗ್ತೀನಿ'

Last Updated :Jan 10, 2022, 6:55 PM IST

ABOUT THE AUTHOR

...view details