ಕರ್ನಾಟಕ

karnataka

ದಲಿತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧ: ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ

By

Published : Jan 18, 2023, 8:20 PM IST

ಯೋಜನೆಗಳನ್ನು ಜಾರಿಗೊಳಿಸುವುದು ನಮ್ಮ ಸಾಮಾಜಿಕ ನ್ಯಾಯ, ಸಬಲೀಕರಣ ಇಲಾಖೆಯ ಕರ್ತವ್ಯ - ಪ್ರಧಾನಿ ಮಾರ್ಗದರ್ಶನದಲ್ಲಿ ಮಹಿಳೆಯರ ಸಬಲೀಕರಣ ಮತ್ತು ಉನ್ನತಿಗಾಗಿ ಉದ್ಯೋಗ ಸೃಷ್ಟಿ - ಎಸ್‌ಸಿ ಸಮುದಾಯದ ಆಕಾಂಕ್ಷಿಗಳಿಗೆ ಉಚಿತ ಯುಪಿಎಸ್‌ಸಿ ಕೋಚಿಂಗ್‌

central-government-is-committed-to-the-welfare-of-dalits-union-minister-a-narayana-swamy
ದಲಿತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧ : ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ

ಮೈಸೂರು: ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಯು ದಲಿತರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪ್ರಧಾನ ಮಂತ್ರಿಯವರ ದೂರದೃಷ್ಟಿಯಾದ ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್ ಮಂತ್ರದ ಜಾರಿಗಾಗಿ ಎಲ್ಲ ರಾಜ್ಯಗಳು ತಮಗೆ ಒದಗಿಸಲಾಗಿರುವ ಅನುದಾನವನ್ನು ಪರಿಣಾಮಕಾರಿಯಾಗಿ ಉಪಯೋಗಿಸಿಕೊಂಡು ವರ್ಗದ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯ ಸಚಿವರಾದ ಎ. ನಾರಾಯಣ ಸ್ವಾಮಿ ತಿಳಿಸಿದರು.

ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ವತಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕುರಿತು ಹಾಗೂ ಸಂಬಂಧಪಟ್ಟ ನಿಯಮ ಹಾಗೂ ಅಧಿನಿಯಮಗಳ ಬಗ್ಗೆ ನಗರದ ಲಲಿತ ಮಹಲ್‌ನಲ್ಲಿ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು. ದೀನದಲಿತ ಸಮುದಾಯಕ್ಕಾಗಿ ಎಲ್ಲಾ ಯೋಜನೆಗಳನ್ನು ಜಾರಿಗೊಳಿಸುವುದು ನಮ್ಮ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಕರ್ತವ್ಯ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರಿಚಯಿಸಿದ ಸಾಕಷ್ಟು ಕೌಶಲ್ಯ ಕಾರ್ಯಕ್ರಮಗಳನ್ನು ನಾವು ಹೊಂದಿದ್ದೇವೆ.

ಅವರ ದೃಷ್ಟಿಕೋನವು ಎಲ್ಲ ರಾಜ್ಯಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಮಂತ್ರವಾಗಿರಬೇಕು, ಇದಕ್ಕಾಗಿ ರಾಜ್ಯಗಳಿಗೆ ಮೀಸಲಾದ ಹಣವನ್ನು ಸಂಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಬಳಸಬೇಕು. ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ಮಹಿಳೆಯರ ಸಬಲೀಕರಣ ಮತ್ತು ಉನ್ನತಿಗಾಗಿ ಮತ್ತು ಸ್ವಯಂ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸ್ಟಾರ್ಟ್ ಅಪ್ ಇಂಡಿಯಾ, ಸ್ಟ್ಯಾಂಡ್-ಅಪ್ ಯೋಜನೆ, ಸ್ಕಿಲ್ ಇಂಡಿಯಾ ಮತ್ತು ಸ್ವಾನಿಧಿ ಮುಂತಾದ ಅನೇಕ ಯೋಜನೆಗಳನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಹೇಳಿದರು.

ಸಮುದಾಯಗಳ ಕಲ್ಯಾಣಕ್ಕಾಗಿ ನಿಗಮಗಳ ಸ್ಥಾಪನೆ: ಕರ್ನಾಟಕ ಸರ್ಕಾರವು ಎಸ್‌ಸಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ನಿಗದಿಪಡಿಸಿದೆ. ಇದು ಎಲ್ಲ ರಾಜ್ಯಗಳಿಗೆ ಮಾದರಿಯಾಗಬೇಕು ಮತ್ತು ಅಂತಹ ಉತ್ತಮ ಅಭ್ಯಾಸವನ್ನು ಅವರು ಅಳವಡಿಸಿಕೊಳ್ಳಬೇಕು. ಮಹಿಳೆಯರ ಸಬಲೀಕರಣಕ್ಕಾಗಿ ಕೇರಳದ ಕುಟುಂಬಶ್ರೀ ಯೋಜನೆ ಕೂಡ ಉತ್ತಮ ಉದಾಹರಣೆಯಾಗಿದೆ. ಕರ್ನಾಟಕದಲ್ಲಿ ಚಮ್ಮಾರರಿಗೆ ಉಚಿತ ಮನೆಗಳನ್ನು ನೀಡಲಾಗುತ್ತಿದೆ ಮತ್ತು ಅದರಲ್ಲೇ ಚರ್ಮದ ಉತ್ಪನ್ನಗಳನ್ನು ತಯಾರಿಸಲು ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ವಿವಿಧ ಸಮುದಾಯಗಳ ಕಲ್ಯಾಣ ಮತ್ತು ಉನ್ನತಿಗಾಗಿ ಅನೇಕ ವಿಶೇಷ ನಿಗಮಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಕಾಯಿದೆ ಮತ್ತು ನಿಯಮಗಳನ್ನು ಅರಿವು ಮೂಡಿಸಲು ಕಾರ್ಯಗಾರ: 31 ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಎಸ್‌ಸಿ ಸಮುದಾಯದ ಆಕಾಂಕ್ಷಿಗಳಿಗೆ ಉಚಿತ ಯುಪಿಎಸ್‌ಸಿ ಕೋಚಿಂಗ್‌ಗಾಗಿ ಡಾ. ಅಂಬೇಡ್ಕರ್ ಸೆಂಟರ್ ಫಾರ್ ಎಕ್ಸಲೆನ್ಸ್ ಅನ್ನು ಪ್ರಾರಂಭಿಸಿದ್ದೇವೆ. ಸಚಿವಾಲಯವು ಎಸ್‌ಸಿ ಉದ್ಯಮಿಗಳಿಗೆ ಸಾಲದ ಮೇಲಿನ ಬಡ್ಡಿಯನ್ನು ಶೇ.8 ರಿಂದ ಶೇ.4ಕ್ಕೆ ಇಳಿಸಿದೆ ಮತ್ತು ರೂ. 10 ಸಾವಿರದಿಂದ ರೂ. 50 ಸಾವಿರದವರೆಗೆ ಸಬ್ಸಿಡಿಯನ್ನು ನೀಡುತ್ತಿದೆ. ನಮ್ಮ ಇಲಾಖೆಯು ಕಾಯಿದೆಗಳು ಮತ್ತು ನಿಯಮಗಳ ಅರಿವು ಮೂಡಿಸಲು ಕಾರ್ಯಾಗಾರಗಳನ್ನು ನಡೆಸುತ್ತಿದೆ ಮತ್ತು ದೇಶದಲ್ಲಿನ ದೀನದಲಿತ ಸಮುದಾಯದ ಅನುಕೂಲಕ್ಕಾಗಿ ರಾಜ್ಯಗಳಾದ್ಯಂತ ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಸಚಿವರು ತಿಳಿಸಿದರು.

ಪ್ರತಿಷ್ಠಿತ ಶಾಲೆಗಳ ಮಟ್ಟದಲ್ಲಿ ಶಿಕ್ಷಣ: ಎಸ್​ ಎಸ್​ಟಿ ಜನಾಂಗಗಳ 23 ಲಕ್ಷ ಕುಟುಂಬಗಳಿಗೆ 75 ಯೂನಿಟ್ ಉಚಿತವಾಗಿ ವಿದ್ಯುತ್ ನೀಡಲು 800 ಕೋಟಿ ಖರ್ಚು ಮಾಡಲಾಗುತ್ತದೆ. ಕೇಂದ್ರದ ನವೋದಯ ಮಾದರಿಯಲ್ಲಿ 830 ಕಾಲೇಜುಗಳನ್ನು ಆರಂಭಿಸಿ ಇಂಗ್ಲೀಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಮೂಲಕ ಪ್ರತಿಷ್ಠಿತ ಶಾಲೆಗಳ ಮಟ್ಟದಲ್ಲಿ ಶಿಕ್ಷಣ ಕೊಡಲಾಗುತ್ತಿದೆ ಹಾಗೂ ಈ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿರುವ 90 ವಿದ್ಯಾರ್ಥಿಗಳು ವಿದೇಶ ವ್ಯಾಸಂಗಕ್ಕೆ ತೆರಳಿದ್ದಾರೆ ಎಂದರು.

ಕೈಗಾರಿಕೆ ನಿರ್ಮಿಸಲು ಸಹಾಯಧನ: ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 7 ಸಾವಿರದಿಂದ 25 ಸಾವಿರದವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಕೈಗಾರಿಕೆಗಳನ್ನು ಆರಂಭಿಸುವ ಉದ್ಯಮಿಗಳಿಗಾಗಿ ಕೈಗಾರಿಕಾ ಶೆಡ್ ನಿರ್ಮಾಣಕ್ಕಾಗಿ ಶೇ.75ರಷ್ಟು ಸಹಾಯಧನದೊಂದಿಗೆ 2 ಕೋಟಿವರೆಗೆ ಸಾಲ ಸೌಲಭ್ಯವನ್ನು ಸರ್ಕಾರದ ಗ್ಯಾರಂಟಿಯೊಂದಿಗೆ ನೀಡುತ್ತಿದ್ದು, ಕೆಎಸ್‌ಎಫ್‌ಸಿ ವತಿಯಿಂದ ಶೇಕಡ 4ರಷ್ಟು ಬಡ್ಡಿದರದಲ್ಲಿ ಸಾಲ ನೀಡಲಾಗುತ್ತಿದೆ. ಇದಕ್ಕಾಗಿ 323 ಕೋಟಿಗಳ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಕೇಂದ್ರ ಸಚಿವ ನಾರಾಯಣಸ್ವಾಮಿ ತಿಳಿಸಿದರು.

ಇದನ್ನೂ ಓದಿ:ಕೊಟ್ಟ ಭರವಸೆ ಈಡೇರಿಸದಿದ್ದರೆ 2028ರ ವಿಧಾನಸಭೆ ಚುನಾವಣೆಗೂ ಮುನ್ನವೇ ಜೆಡಿಎಸ್ ವಿಸರ್ಜನೆ: ಹೆಚ್​​​ಡಿಕೆ

ABOUT THE AUTHOR

...view details