ಕರ್ನಾಟಕ

karnataka

ನಂದಿ ಧ್ವಜಕ್ಕೆ ಮಕರ ಲಗ್ನದಲ್ಲಿ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

By

Published : Oct 5, 2022, 3:22 PM IST

ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳು, ನಾಡಿಗೆ ಒಳ್ಳೆಯದಾಗಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನಂದಿ ಧ್ವಜಕ್ಕೆ ಮಕರ ಲಗ್ನದಲ್ಲಿ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ
ನಂದಿ ಧ್ವಜಕ್ಕೆ ಮಕರ ಲಗ್ನದಲ್ಲಿ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅವರ ಕುಟುಂಬಸ್ಥರು ಅರಮನೆಯ ಬಲರಾಮ ಗೇಟ್ ಬಳಿ ಕೋಟೆ ಆಂಜನೇಯ ದೇವಾಲಯ ಮುಂಭಾಗ ನಂದಿ ಧ್ವಜಕ್ಕೆ 2.30 ಗಂಟೆಯ ಶುಭ ಮಕರ ಲಗ್ನದಲ್ಲಿ ಪೂಜೆ ಸಲ್ಲಿಸಿದರು.

ನಂದಿ ಧ್ವಜಕ್ಕೆ ಮಕರ ಲಗ್ನದಲ್ಲಿ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳು, ನಾಡಿಗೆ ಒಳ್ಳೆಯದಾಗಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಜೊತೆಯಲ್ಲಿ ಅವರ ಕುಟುಂಬದವರು, ಮೈಸೂರು ಜಿಲ್ಲಾ ಉಸ್ತುವರಿ ಸಚಿವ ಎಸ್.ಟಿ ಸೋಮಶೇಖರ್, ಸಚಿವ ಬಿ ಸಿ ಪಾಟೀಲ್, ಸುನೀಲ್ ಕುಮಾರ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ನಂತರ ದಸರಾ ಮೆರವಣಿಗೆ ಪ್ರಾರಂಭವಾಯಿತು. ಮೆರವಣಿಗೆಯ ನೇತೃತ್ವವನ್ನು ನಿಶಾನೆ ಆನೆಯಾದ ಅರ್ಜುನ ವಹಿಸಿದ್ದು, ಅನಂತರ ಕಲಾ ತಂಡಗಳು, ಸ್ಥಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಿದವು.

ಓದಿ:ಮಹಿಳಾ ವ್ಯಾಪಾರಿ ಯೋಗಕ್ಷೇಮ ವಿಚಾರಿಸಿದ ಸಿಎಂ ಬೊಮ್ಮಾಯಿ

ABOUT THE AUTHOR

...view details