ಕರ್ನಾಟಕ

karnataka

ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಶಾಸಕ ತನ್ವೀರ್ ಸೇಠ್ ನಿರ್ಧಾರ: ಈಟಿವಿ ಭಾರತದ ಜೊತೆ ಸಂದರ್ಶನ

By

Published : Feb 28, 2023, 2:57 PM IST

Updated : Feb 28, 2023, 3:35 PM IST

ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರದಿಂದ ಕ್ಷೇತ್ರದ ಜನ ವಿಚಲಿತರಾಗಿದ್ದಾರೆ. ಸೇಠ ಅವರ ಈ ಹೇಳಿಕೆಯನ್ನು ಹಿಂದೆ ಪಡೆಯುವಂತೆ ಅವರ ಮನೆ ಮುಂದು ಬಂದು ಪ್ರತಿಭಟನೆ ನಡೆಸಿದರು.

mla tanveer seth interview
mla tanveer seth interview

ಈಟಿವಿ ಭಾರತದ ಜೊತೆ ಶಾಸಕ ತನ್ವೀರ್ ಸೇಠ್ ಸಂದರ್ಶನ

ಮೈಸೂರು: ತಮ್ಮ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆ, ಪಕ್ಷದ ವರಿಷ್ಠರಿಗೆ ಲಿಖಿತ ರೂಪದಲ್ಲಿ‌ ನಾನು ಚುನಾವಣೆಯಲ್ಲಿ ಸ್ಪರ್ಧೆ‌ ಮಾಡುವುದಿಲ್ಲ ಎಂದು ತಿಳಿಸಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧ ಎಂದು ಎನ್ ಆರ್ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಇಂದು (ಮಂಗಳವಾರ) ಈಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ರಾಜಕೀಯ ಮುಂದಿನ ನಿಲುವಿನ ಬಗ್ಗೆ ಮಾತನಾಡಿದ ಅವರು, ’’ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ತಿರ್ಮಾನ ಕೈಗೊಂಡಿರುವೆ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಬಗ್ಗೆ ಕಳೆದ ಡಿಸೆಂಬರ್​ನಲ್ಲಿಯೇ ಪಕ್ಷದ ವರಿಷ್ಠರಿಗೆ ಲಿಖಿತ ರೂಪದಲ್ಲಿ ತಿಳಿಸಿದ್ದೇನೆ. ನನ್ನ ಆರೋಗ್ಯದಲ್ಲಿ ‌ಇನ್ನೂ ಚೇತರಿಕೆ ಕಂಡಿಲ್ಲ. ಆದ್ದರಿಂದ ಮುಂಬರುವ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದ್ದೆ. ಆದರೆ, ಅವರು ಇಲ್ಲಿಯವರೆಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ‘‘ ಎಂದು ತನ್ವಿರ್​ ಸೇಠ್​ ಹೇಳಿದ್ದಾರೆ.‌

ಕಾಂಗ್ರೆಸ್ ಅಧಿವೇಶನದಲ್ಲಿ ಭಾವಹಿಸಿದ್ದೆ:ಮೊನ್ನೆ ರಾಯಪುರದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸಹ ಭಾಗವಹಿಸಿದ್ದೆ. ನನ್ನ ಮೇಲೆ ಮಾರಣಾಂತಿಕ ಹಲ್ಲೆಯಾದ ನಂತರ, ನನಗೆ ಮಾತನಾಡಲು‌ ಕಷ್ಟವಾಗುತ್ತಿದ್ದು, ಇನ್ನೂ ಸಂಪೂರ್ಣ ಗುಣಮುಖನಾಗಿಲ್ಲ. ಆದ್ದರಿಂದ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಈ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ. ಆದರೆ, ಪಕ್ಷದ ಹೈಕಮಾಂಡ್ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅವರ ತೀರ್ಮಾನಕ್ಕಾಗಿ ಕಾಯುತ್ತಿದ್ದೇನೆ ಎಂದು ತಮ್ಮ ಆರೋಗ್ಯ ಸಮಸ್ಯೆ ಬಗ್ಗೆ ತನ್ವೀರ್ ಸೇಠ್ ವಿವರಿಸಿದರು.

ಹಾಲಿ ಶಾಕನಾಗಿರುವ ಕಾರಣ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದೇನೆ.‌ ನಾನಿರುವವರೆಗೂ ನನ್ನ ಕುಟುಂಬದ ಯಾರು ರಾಜಕೀಯಕ್ಕೆ ಬರುವುದಿಲ್ಲ. ನನ್ನ ಈ ನಿರ್ಧಾರ ಮತ್ತು ಮನವಿಯನ್ನು ಎಐಸಿಸಿ ವರಿಷ್ಠರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿರಸ್ಕರಿಸಿದ್ದಾರೆ. ಮುಂದೆ ಏನಾಗುತ್ತದೋ ಎಂಬುದನ್ನು ಕಾದು ನೋಡಬೇಕು. ಆದರೆ, ವರಿಷ್ಠರೂ ಎನೇ ತೀರ್ಮಾನ ತೆಗೆದುಕೊಳ್ಳಲಿ. ಅದಕ್ಕೆ ನಾನು ಬದ್ಧ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಶಾಸಕ ತನ್ವೀರ್ ಸೇಠ್

ಮನೆ ಮುಂದೆ ಕಾರ್ಯಕರ್ತರ ಹೈಡ್ರಾಮ:ತನ್ವೀರ್ ಸೇಠ್ ಅವರ ಈ ನಿರ್ಧಾರದಿಂದ ವಿಚಲಿತರಾದ ಕ್ಷೇತ್ರದ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಬೆಳಗ್ಗೆಯೇ ಅವರ ಮನೆಗೆ ಆಗಮಿಸಿ, ತಮ್ಮ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯ ಮಾಡಿದರು. ತಾವು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ಹೇಳಿಕೆ ನೀಡುವವರೆಗೂ ನಾವು ಈ ಜಾಗದಿಂದ ಹೋಗುವುದಿಲ್ಲ ಎಂದು ಮನೆ ಮುಂದಿನ ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದರು. ಓರ್ವ ಕಾರ್ಯಕರ್ತ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರೆ, ಮತ್ತೋರ್ವ ಕಾರ್ಯಕರ್ತ ತನ್ವೀರ್ ಸೇಠ್ ಮನೆಯ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಹ ನಡೆಯಿತು. ಸದ್ಯ ಶಾಸಕರ ಮನೆ ಮುಂದೆ ಪ್ರತಿಭಟನೆ ಮುಂದುವರೆದಿದ್ದು ಪೊಲೀಸ್​ ಬಂದೋಬಸ್ತ್ ಹಾಕಲಾಗಿದೆ.

ಇದನ್ನೂ ಓದಿ:ಬೆಂಗಳೂರಿಗೆ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಭೇಟಿ: ಪರ್ಯಾಯ ಸಂಚಾರ ಮಾರ್ಗ ಬಳಸಲು ಸಾರ್ವಜನಿಕರಿಗೆ ಸೂಚನೆ

Last Updated : Feb 28, 2023, 3:35 PM IST

ABOUT THE AUTHOR

...view details