ಕರ್ನಾಟಕ

karnataka

ಸ್ನೇಹಿತರಿಗೆ ಫೋನ್​​ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ!

By

Published : Mar 11, 2020, 1:14 PM IST

ಸ್ನೇಹಿತರಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಜೀವನದಲ್ಲಿ ನನಗೆ ತುಂಬಾ ಬೇಸರವಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಸ್ನೇಹಿತರಿಗೆ ಹೇಳಿದ್ದನಂತೆ.

person-commits-suicide-after-informing-friends-through-phone-call
person-commits-suicide-after-informing-friends-through-phone-call

ಮೈಸೂರು:ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರಿಗೆ ಫೋನ್ ಮಾಡಿ ಹೇಳಿ ಕೆರೆಗೆ ಹಾರಿದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.

ಭುಗತಗಳ್ಳಿ ನಿವಾಸಿ ಬಸವಣ್ಣ(28) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮಂಗಳವಾರ ಸಂಜೆ 5 ಗಂಟೆಗೆ ತನ್ನ ಗೆಳೆಯರಿಗೆ ಕರೆ ಮಾಡಿ, ಜೀವನದಲ್ಲಿ ನನಗೆ ತುಂಬಾ ಬೇಸರವಾಗಿದೆ. ನಾನು ಬದುಕುವುದಿಲ್ಲ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಕರೆ ಕಟ್ ಮಾಡಿದ್ದನಂತೆ.

ಸ್ನೇಹಿತರಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಆದರೆ, ಈತ ತಮಾಷೆ ಮಾಡುತ್ತಿದ್ದಾನೆ ಎಂದು ಭಾವಿಸಿದ್ದ ಸ್ನೇಹಿತರಿಗೆ, ಬಸವಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಭಾರೀ ಆಘಾತ ನೀಡಿದೆ. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details