ಮೈಸೂರು: ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಇಂದು ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಮನೆ ದೇವರು ಹಾಗೂ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯ ಅವರ ಜೊತೆಗೆ ಮಗ ಯತೀಂದ್ರ ಸಿದ್ದರಾಮಯ್ಯ, ಮೊಮ್ಮಗ ಧವನ್ ರಾಕೇಶ್ ಕೂಡ ಇದ್ದರು.
ಸಿದ್ದರಾಮಯ್ಯ ಇಂದು ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ನಿನ್ನೆಯೇ ಮೈಸೂರಿಗೆ ಆಗಮಿಸಿರುವ ಸಿದ್ದರಾಮಯ್ಯ, ನಿನ್ನೆ ಸಂಜೆ ಕ್ಷೇತ್ರದ ಪ್ರಮುಖರ ಸಭೆ ನಡೆಸಿ, ಎಲ್ಲರೂ ಇಂದು ನಾಮಪತ್ರ ಸಲ್ಲಿಸಲು ಆಗಮಿಸಬೇಕೆಂದು ತಿಳಿಸಿ ನಂತರ ತಮ್ಮ ತಮ್ಮ ಗ್ರಾಮಗಳಲ್ಲಿ ಕೆಲಸ ಮಾಡಬೇಕೆಂದು ಮನವಿ ಮಾಡಿದ್ದರು. ಇಂದು ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ಆಗಮಿಸಿ, ಅಲ್ಲಿ ಮನೆ ದೇವರಾದ ಸಿದ್ದರಾಮೇಶ್ವರನಿಗೆ ಪೂಜೆ ಸಲ್ಲಿಸಿದರು. ನಂತರ ಗ್ರಾಮದಲ್ಲಿ ಇರುವ ಶ್ರೀ ರಾಮಮಂದಿರಕ್ಕೆ ಭೇಟಿ ನೀಡಿ ಶ್ರೀ ರಾಮನಿಗೆ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಿದ್ದರಾಮನಹುಂಡಿಯ ಗ್ರಾಮಸ್ಥರು ಸಿದ್ದರಾಮಯ್ಯರಿಗೆ ಅದ್ದೂರಿ ಸ್ವಾಗತ ಕೋರಿದರು. ಮಗ ಯತೀಂದ್ರ ಸಿದ್ದರಾಮಯ್ಯ, ಮೊಮ್ಮಗ ಧವನ್ ರಾಕೇಶ್ ಹಾಜರಿದ್ದರು.