ಕರ್ನಾಟಕ

karnataka

ಮನೆಯಲ್ಲಿ ಯುವಕನ ಅನುಮಾನಾಸ್ಪದ ಸಾವು: ಪೋಷಕರಿಂದ ದೂರು ದಾಖಲು

By

Published : Mar 14, 2023, 10:24 PM IST

ಯುವಕನೊಬ್ಬ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ನಡೆದಿದೆ.

Suspicious death of young man at home
ಮನೆಯಲ್ಲಿ ಯುವಕನ ಅನುಮಾನಾಸ್ಪದ ಸಾವು: ಪೋಷಕರಿಂದ ದೂರು ದಾಖಲು

ಮೈಸೂರು: ಸಂಬಂಧಿಕರೊಬ್ಬರ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದ ಯುವಕನೊಬ್ಬ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ನಡೆದಿದೆ. ಕುಟುಂಬಸ್ಥರು ಮೊದಲು ಯುವಕನದ್ದು ಸಹಜ ಸಾವೆಂದು ತಿಳಿದು ಅಂತ್ಯಕ್ರಿಯೆಗೆ ಮುಂದಾಗಿದ್ದರು. ಈ ವೇಳೆ ಯುವಕನ ಮೈ ಮೇಲಿದ್ದ ಗಾಯಗಳನ್ನ ಕಂಡ ಪೋಷಕರು ಅಂತ್ಯಕ್ರಿಯೆ ನಿಲ್ಲಿಸಿ, ಅನುಮಾನಾಸ್ಪದ ಸಾವೆಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿನಯ್(22) ಅನುಮಾನಾಸ್ಪದವಾಗಿ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ, ಎರಡು ದಿನಗಳ ಹಿಂದೆ ಚಿಲಕುಂದ ಗ್ರಾಮದಲ್ಲಿ ಸಂಬಂಧಿಕರ ಹುಟ್ಟು ಹಬ್ಬಕ್ಕೆಂದು ತೆರಳಿದ್ದ, ತೆರಳುವಾಗ ತಾಯಿಯ ಬಳಿ ಒಂದು ಸಾವಿರ ರೂಪಾಯಿ ಪಡೆದು, ಅದೇ ಹಣದಲ್ಲಿ ಸ್ನೇಹಿತರ ಜೊತೆ ಸೇರಿ ಪಾರ್ಟಿ ಮಾಡಿದ್ದ ಎನ್ನಲಾಗುತ್ತಿದೆ. ಸಂಬಂಧಿಕರ ಹುಟ್ಟು ಹಬ್ಬ ಮುಗಿಸಿಕೊಂಡು ಎರಡು ದಿನಗಳ‌ ನಂತರ ಮನೆಗೆ ಬಂದು ಮಲಗಿದ್ದಾನೆ. ಮಾರನೇ ದಿನ ಬೆಳಗ್ಗೆ‌ ಯುವಕ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ, ಯುವಕನ ಶವ, ಕತ್ತಿಗೆ ಸೀರೆ ಸುತ್ತಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದು, ಅದು ಸಹಜ ಸಾವೆಂದು ತಿಳಿದುಕೊಂಡ ಕುಟುಂಬ ಸದಸ್ಯರು ಅಂತ್ಯಕ್ರಿಯೆಗೆ ಮುಂದಾಗಿದ್ದರು.

ಇದನ್ನೂ ಓದಿ:ದೊಡ್ಡಬಳ್ಳಾಪುರ: ಹೊಂಗೆಕಾಯಿ ಉದರಿಸುವ ನೆಪದಲ್ಲಿ ವೃದ್ದೆಯ ಮಾಂಗಲ್ಯ ಸರ ಕದ್ದ ಕಳ್ಳರು

ದೇಹದ ಮೇಲೆ ಗಾಯದ ಗುರುತುಗಳು ಪತ್ತೆ:ಯುವಕನ ಅಂತ್ಯಕ್ರಿಯೆಗೆ ಮುಂದಾಗಿದ್ದ ಕುಟುಂಬ ಸದಸ್ಯರು ಮೃತದೇಹಕ್ಕೆ ಸಾಂಪ್ರದಾಯಿಕವಾಗಿ ಸ್ನಾನ ಮಾಡಿಸುವ ವೇಳೆ ಬೆನ್ನಿನ ಮೇಲೆ ಹಲವು ಗಾಯದ ಗುರುತುಗಳು ಕಂಡುಬಂದಿವೆ. ಜೊತೆಗೆ ಬಲಗಾಲಿನಲ್ಲಿ ಯಾರೋ ಹಲ್ಲಿನಿಂದ ಕಚ್ಚಿದ ಹಾಗೇ ಗುರುತುಗಳು ಕಂಡುಬಂದಿದ್ದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಪೋಷಕರು ಇದೊಂದು ಅನುಮಾನಾಸ್ಪದ ಸಾವೆಂದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:ಡ್ರಮ್ ನಲ್ಲೇ ಮತ್ತೊಂದು ಶವ ಪತ್ತೆ ಪ್ರಕರಣ.. ಆರೋಪಿಗಳ ಸುಳಿವು ಸಿಕ್ಕಿದೆ ಎಂದ ರೈಲ್ವೆ ಎಸ್ಪಿ

ಯುವಕನ ಮೇಲೆ ಮಾರಣಾಂತಿಕ ಹಲ್ಲೆ:ಮತ್ತೊಂದೆಡೆ ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ‌ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ನಡೆದಿದೆ. ಪುತ್ರೇಶ ಬೆಳ್ಳೆನವರ ಹಲ್ಲೆಗೊಳಗಾದ ಯುವಕ.‌ ಇದೇ ಗ್ರಾಮದ ಯುವಕ ರಾಹುಲ್ ಎಂಬಾತ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪರಿಚಿತ ಶವ ಪತ್ತೆ: ಅಪರಿಚಿತ ವ್ಯಕ್ತಿಯೊಬ್ಬನ ಶವ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿ ಕಾಲುವೆಯಲ್ಲಿ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸರ ತನಿಖೆ ಬಳಿಕ ತಿಳಿದು ಬರಬೇಕಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಆರೋಪ: ಮಾಜಿ ಸಚಿವರ ಪುತ್ರನ ವಿರುದ್ಧ ಎಫ್ಐಆರ್

ABOUT THE AUTHOR

...view details