ಕರ್ನಾಟಕ

karnataka

ರಾಯಚೂರಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ

By

Published : Dec 5, 2022, 10:19 AM IST

clash between congress and bjp activist
ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ ()

ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ನೂಕಾಟ-ತಳ್ಳಾಟ ನಡೆದ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು: ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ನೂಕಾಟ-ತಳ್ಳಾಟ ನಡೆದ ಘಟನೆ ನಗರದಲ್ಲಿ ನಡೆದಿದೆ.

ನಗರದ 7ನೇ ವಾರ್ಡ್​ ಬಡಾವಣೆಯ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಡಾ. ಶಿವರಾಜ್ ಪಾಟೀಲ್ ಭೂಮಿ ಪೂಜೆ ಮಾಡಿ ರಸ್ತೆ ಕಾಮಗಾರಿ ಪ್ರಾರಂಭಿಸುವುದಕ್ಕೆ ಚಾಲನೆ ನೀಡಲು ಮುಂದಾಗಿದ್ದರು. ಆದ್ರೆ, ಚರಂಡಿ ಹಾಗೂ ಯುಜಿಡಿ ಕೆಲಸ ಮಾಡದೇ ರಸ್ತೆ ಕಾಮಗಾರಿಗೆ ಚಾಲನೆ ನೀಡುತ್ತಿರುವುದಕ್ಕೆ ಸ್ಥಳೀಯರು ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ

ಇದನ್ನೂ ಓದಿ:ಒಂದೇ ದಿನಕ್ಕೆ ಕಿತ್ತೋದ ಮಂಗಳೂರು - ಮುತ್ತಾಳ ರಸ್ತೆ.. ಕಳಪೆ ಕಾಮಗಾರಿ ಆರೋಪ

ಕೆಲ ತಿಂಗಳ ಹಿಂದಷ್ಟೇ ಲಕ್ಷಾಂತರ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಇದೀಗ ಕಾಮಗಾರಿಯಲ್ಲಿ ಯಾಕೆ ಬದಲಾವಣೆ ಮಾಡುತ್ತಿರುವುದು ಎಂದು ಸ್ಥಳೀಯರು ಪ್ರಶ್ನಿಸಿದರು. ಈ ವೇಳೆ ಶಾಸಕ ಡಾ.ಶಿವರಾಜ್ ಪಾಟೀಲ್ ಪರವಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣಗೊಂಡಿತ್ತು. ಈ ವೇಳೆ ಸ್ಥಳದಲ್ಲಿ ಬೀಡು ಬಿಟ್ಟಿದ್ದ ಪೊಲೀಸರು ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ABOUT THE AUTHOR

...view details