ಕರ್ನಾಟಕ

karnataka

ರಾಯಚೂರು: ನರೇಗಾ ಯೋಜನೆಯಲ್ಲಿ ಅಕ್ರಮ, ನಾಲ್ವರು ಪಿಡಿಒಗಳ ಅಮಾನತು

By ETV Bharat Karnataka Team

Published : Dec 10, 2023, 6:22 PM IST

Updated : Dec 10, 2023, 10:29 PM IST

ನರೇಗಾ ಯೋಜನೆಯಡಿ ನಡೆದ ಅಕ್ರಮ ಸಂಬಂಧ ಆರೋಪ ಎದುರಿಸುತ್ತಿರುವ ನಾಲ್ವರು ಪಿಡಿಒಗಳನ್ನು ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಪಾಂಡ್ವೆ ರಾಹುಲ್ ತುಕಾರಾಮ ಅವರು ಆದೇಶ ಹೊರಡಿಸಿದ್ದಾರೆ.

four-pdo-suspended-for-mgnrega-scheme-corruption
ರಾಯಚೂರು: ನರೇಗಾದಲ್ಲಿ ಅಕ್ರಮ; ನಾಲ್ವರು ಪಿಡಿಒಗಳ ಅಮಾನತು

ರಾಯಚೂರು:ದೇವದುರ್ಗ ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ನಾಲ್ವರು ಪಿಡಿಒಗಳನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ. ಕ್ಯಾದಗೇರಾ ಪಿಡಿಒ ಸಿ.ಬಿ. ಪಾಟೀಲ್, ಗಾಣಧಾಳ ಪಿಡಿಒ ಮಲ್ಲಪ್ಪ, ಜಾಲಹಳ್ಳಿ ಪಿಡಿಒ ಪತ್ತೆಪ್ಪ ರಾಠೋಡ್​, ಶಾವಂತಗೇರಾ ಪಿಡಿಒ ಗುರುಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ. ಜಿಲ್ಲೆಯ ದೇವದುರ್ಗದ 33 ಗ್ರಾ.ಪಂ ಗಳಲ್ಲಿ‌ 100 ಕೋಟಿಗೂ ಹೆಚ್ಚು ರೂ. ಅಕ್ರಮ ನಡೆದಿರುವ ಬಗ್ಗೆ ಸಾಮಾಜಿಕ ಲೆಕ್ಕಪರಿಶೋಧನಾ ಸಮಿತಿ‌ ತನಿಖೆಯಲ್ಲಿ ಪತ್ತೆಯಾಗಿತ್ತು.

ಆದೇಶದಲ್ಲಿ ಏನಿದೆ?: ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957 ರ ನಿಯಮ-10 (1) (ಡಿ) ಅಡಿ ಕ್ಯಾದಗೇರಾ ಪಿಡಿಒ ಸಿ. ಬಿ. ಪಾಟೀಲ್, ಗಾಣಧಾಳ ಪಿಡಿಒ ಮಲ್ಲಪ್ಪ, ಜಾಲಹಳ್ಳಿ ಪಿಡಿಒ ಪತ್ತೆಪ್ಪ ರಾಠೋಡ್​, ಶಾವಂತಗೇರಾ ಪಿಡಿಒ ಗುರುಸ್ವಾಮಿ ಅವರುಗಳ ವಿರುದ್ಧದ ಆರೋಪಗಳ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದೇನೆ ಹಾಗೂ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ ಆದೇಶಿಸಿದ್ದಾರೆ.

ಇದನ್ನೂ ಓದಿ:ವಿಜಯಪುರ: ಪಡಿತರ ಅಕ್ಕಿ ಅಕ್ರಮ ಸಾಗಾಟ; ಲಾರಿಸಮೇತ ಆರೋಪಿಗಳ ಬಂಧನ

ಕಾನ್‌ಸ್ಟೇಬಲ್‌ ಅಮಾನತು(ದಾವಣಗೆರೆ):ಇತ್ತೀಚಿಗೆ, ಬಂಧಿತ ಆರೋಪಿಯಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಹರಿಹರ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್‌​ ಮಂಜುನಾಥ್ ಬಿ.ವಿ. ಎಂಬುವರನ್ನು ಅಮಾನತು ಮಾಡಲಾಗಿತ್ತು. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ಠಾಣೆಗೆ ಕರೆತಂದಿದ್ದ ಆರೋಪಿಯೊಬ್ಬರಿಂದ ಕಾನ್​​ಸ್ಟೇಬಲ್‌ ಲಂಚ ಪಡೆದಿದ್ದರು. ಈ ಸಂಬಂಧ ಎಸ್​ಪಿ ಉಮಾ ಪ್ರಶಾಂತ್‌ ಅಮಾನತು ಆದೇಶ ಹೊರಡಿಸಿದ್ದರು. ಠಾಣೆಗೆ ಕರೆತಂದಿದ್ದ ಆರೋಪಿಗೆ ಕಾನ್‌ಸ್ಟೇಬಲ್‌ ಮಂಜುನಾಥ್, ನಿನ್ನ ಮೇಲೆ ಪೋಕ್ಸೋ ಪ್ರಕರಣ ದಾಖಲು ಮಾಡ್ತೀನಿ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಆರೋಪವೂ ಕೇಳಿಬಂದಿತ್ತು. ನಂತರ ಠಾಣೆಯಲ್ಲೇ ಆರೋಪಿಯನ್ನು ಹೆದರಿಸಿ 12 ಸಾವಿರ ರೂ. ಲಂಚ ಪಡೆದಿದ್ದರು. ಇದಲ್ಲದೇ ಅದೇ ಆರೋಪಿ ಬಳಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿತ್ತು.

Last Updated :Dec 10, 2023, 10:29 PM IST

ABOUT THE AUTHOR

...view details