ಕರ್ನಾಟಕ

karnataka

ರಾಯಚೂರು: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಡಿಸಿ ಚಾಲನೆ

By

Published : Sep 17, 2021, 12:11 PM IST

Kalyana Karnataka Utsav celebrated in raichur

ರಾಯಚೂರು ಜಿಲ್ಲಾಧಿಕಾರಿ ಡಾ.ಸತೀಶ್ ಬಿ.ಸಿ ಅವರು ಇಂದು ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರಾಯಚೂರು: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಡಾ.ಸತೀಶ್ ಬಿ.ಸಿ. ಧ್ವಜಾರೋಹಣ ನೇರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಪ್ರದಾಯದಂತೆ ಜಿಲ್ಲಾ ಉಸ್ತುವರಿ ಸಚಿವ ಹಾಲಪ್ಪ ಆಚಾರ್ ಧ್ವಜಾರೋಹಣ ನೇರವೇರಿಸಬೇಕಾಗಿತ್ತು. ಆದರೆ, ಸಚಿವರ ಅನುಪಸ್ಥಿತಿ ಹಿನ್ನೆಲೆ ಡಿಸಿ ಧ್ವಜಾರೋಹಣ ನೇರವೇರಿಸಿದರು. ನಂತರ ಪೊಲೀಸ್, ಅಗ್ನಿಶಾಮಕ, ಅರಣ್ಯ ಇಲಾಖೆ, ಮಹಿಳಾ ಪೊಲೀಸ್ ಇಲಾಖೆ ಅಧಿಕಾರಿಗಳು ಪಂಥಸಂಚಲನ ನಡೆಸಿದರು.

ರಾಯಚೂರಿನಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ

ಇನ್ನು ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು, ಸಂಸದರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಭಾಗಿಯಾಗದಿರುವುದರಿಂದ ಖುರ್ಚಿಗಳು ಖಾಲಿ ಇದ್ದ ದೃಶ್ಯ ಕಂಡು ಬಂದಿತು.

ABOUT THE AUTHOR

...view details