ಕರ್ನಾಟಕ

karnataka

ಟ್ರಾಕ್ಟರ್​ಗೆ ಲಾರಿ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಾಯ

By

Published : Apr 18, 2021, 12:36 PM IST

accident
accident

ಮೇವು ತರಲು ಟ್ರ್ಯಾಕ್ಟರ್​ನಲ್ಲಿ ಹೋಗುತ್ತಿದ್ದ ಸಂದರ್ಭ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​ನಲ್ಲಿದ್ದ ಓರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು: ಟ್ರ್ಯಾಕ್ಟರ್​ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸ್ವಾನ್ನಪ್ಪಿದ್ದರೆ, ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಗೊಲಪಲ್ಲಿ ಬಳಿ ಸಂಭವಿಸಿದೆ.

ಲಿಂಗಸೂಗೂರು ತಾಲೂಕಿನ ಗುರುಗುಂಟಾ ಗ್ರಾಮದ ಬಳಿ ಬರುವ ರಾಯದುರ್ಗ ಗ್ರಾಮದ ನಿವಾಸಿ ದುರುಗುಪ್ಪ(35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾಯದುರ್ಗ ಗ್ರಾಮದಿಂದ ಅಲ್ಲಳ್ಳಿ ಗ್ರಾಮಕ್ಕೆ ಮೇವು ತೆಗೆದುಕೊಂಡು ಬರಲು ಟ್ರಾಕ್ಟರ್​ನಲ್ಲಿ ಐವರು ತೆರಳುತ್ತಿದ್ದರು. ಮಾರ್ಗ ಮಧ್ಯೆ ಗೊಲಪಲ್ಲಿ ಬ್ರಿಡ್ಜ್ ಬಳಿ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್​ನಲ್ಲಿದ್ದ ದುರುಗಪ್ಪ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಓದಿ:ಧಾರವಾಡದಲ್ಲಿ ಕಾರು ಪಲ್ಟಿ: ರೋಜಾ ಮುಗಿಸಿ ಬರುತ್ತಿದ್ದ ಇಬ್ಬರು ಯುವಕರು ಸಾವು

ಘಟನೆ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ABOUT THE AUTHOR

...view details