ರಾಯಚೂರು: ಹೃದಯ ರೋಗ ಹಾಗೂ ವೈಯಕ್ತಿಕ ಸಮಸ್ಯೆಗಳಿಂದ ಮನನೊಂದು ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿಂಧನೂರು ಪಟ್ಟಣದ ಗಂಗಾನಗರ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಾಲಪ್ಪ ಸಂಗಪ್ಪ(43) ಮೃತರು.
ಭಾನುವಾರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ರಾತ್ರಿ ಮನೆ ಮಾಲೀಕರು ಶಿಕ್ಷಕ ಮನೆಯಿಂದ ಹೊರಬರದೇ ಇರುವುದನ್ನು ಗಮನಿಸಿ ಅನುಮಾನಗೊಂಡು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಬಾಲಪ್ಪ ಸಂಗಪ್ಪ ಮೂಲತಃ ಮುದ್ದೇಬಿಹಾಳ ತಾಲೂಕಿನ ನಿವಾಸಿ. ಸಿಂಧನೂರಿನ ಕುರ್ಡಿಯ ಸಿಆರ್ ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರು ಮಕ್ಕಳು ಹಾಗೂ ಪತ್ನಿ ಊರಿಗೆ ಹೋದಾಗ ನಿನ್ನೆ ಸಾವಿಗೆ ಶರಣಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬಳಿಕ, ಕುಟುಂಬಸ್ಥರಿಗೆ ನೀಡಲಾಯಿತು. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಉ.ಕನ್ನಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಲ್ಲಿಕೆಯಾಗದ ಪ್ರಸ್ತಾವನೆ: ಆರ್ಟಿಐನಿಂದ ಸತ್ಯ ಬಯಲು