ಕರ್ನಾಟಕ

karnataka

ಕನಕಪುರ ಕಾಂಗ್ರೆಸ್​ ಮುಖಂಡ ಗಡ್ಡ ಶಿವಕುಮಾರ್ ಅಂತಿಮ ಯಾತ್ರೆಗೆ ಹೆಗಲು ನೀಡಿದ ಡಿಕೆಶಿ

By

Published : Sep 21, 2021, 7:34 PM IST

Former president of Kanakapura Planning Authority Gadda Sivakumar passes away
ಅಂತಿಮ ಯಾತ್ರೆಗೆ ಹೆಗಲು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ()

ಗಡ್ಡ ಶಿವಕುಮಾರ್ ಅವರು ಅಪಾರ ಬಂಧು-ಬಳಗ, ಸ್ನೇಹಿತರನ್ನು ಅಗಲಿದ್ದು. ಇವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸ್ವಗ್ರಾಮ ದೊಡ್ಡ ಆಲಹಳ್ಳಿಯಲ್ಲಿ ನಡೆಯಿತು. ಸ್ವತಃ ಡಿಕೆಶಿ ಪಲ್ಲಕ್ಕಿಗೆ ಹೆಗಲು ನೀಡುವ ಮೂಲಕ ಅಂತ್ಯಸಂಸ್ಕಾರದಲ್ಲಿ‌ ಭಾಗಿಯಾಗಿದ್ದರು..

ರಾಮನಗರ :ಕನಕಪುರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರೂ ಆದ ಗಡ್ಡ ಶಿವಕುಮಾರ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ಅಲ್ಲದೇ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ, ಅಂತಿಮ ಯಾತ್ರೆಗೆ ಹೆಗಲು ನೀಡಿದ್ದಾರೆ.

ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದ ಇವರು, ಕನಕಪುರದ ಮುನಿಸಿಪಲ್ ಹೈಸ್ಕೂಲ್ ಹಿಂಭಾಗದಲ್ಲಿ ನೆಲೆಸಿದ್ದರು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಅಂತಿಮ ಯಾತ್ರೆಗೆ ಹೆಗಲು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದು, ಅಂತ್ಯಸಂಸ್ಕಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ಗಡ್ಡ ಶಿವಕುಮಾರ್ ಅವರು ಅಪಾರ ಬಂಧು-ಬಳಗ, ಸ್ನೇಹಿತರನ್ನು ಅಗಲಿದ್ದು. ಇವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸ್ವಗ್ರಾಮ ದೊಡ್ಡ ಆಲಹಳ್ಳಿಯಲ್ಲಿ ನಡೆಯಿತು. ಸ್ವತಃ ಡಿಕೆಶಿ ಪಲ್ಲಕ್ಕಿಗೆ ಹೆಗಲು ನೀಡುವ ಮೂಲಕ ಅಂತ್ಯಸಂಸ್ಕಾರದಲ್ಲಿ‌ ಭಾಗಿಯಾಗಿದ್ದರು.

ಓದಿ: ಕ್ಯಾಷ್ ಡೆಪಾಸಿಟರ್​ನಲ್ಲಿ ಹಣ ಜಮಾ ಮಾಡುವವರೇ ಇವನ ಟಾರ್ಗೆಟ್​​.. ಹಣ ಗಳಿಕೆಗೆ ಅಡ್ಡದಾರಿಗಿಳಿದ ಬಿಇ ಪದವೀಧರ..

TAGGED:

ABOUT THE AUTHOR

...view details