ರಾಮನಗರ :ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ 28 ವರ್ಷದ ಶೃತಿ (28) ಎಂದು ಗುರುತಿಸಲಾಗಿದೆ.
ಏಕಾಏಕಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ.. ಕಾರಣ ನಿಗೂಢ!
ಸ್ಪುರದ್ರೂಪಿ ಯುವತಿಯಾದ ಈಕೆ ಏಕಾಎಕಿ ರೈಲ್ವೆ ನಿಲ್ದಾಣಕ್ಕೆ ಬಂದು ಈ ರೀತಿಯ ಕೃತ್ಯಕ್ಕೆ ಒಳಗಾಗಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಶೃತಿ ಚನ್ನಪಟ್ಟಣದ ಮಂಗಳವಾರಪೇಟೆಯ ತಿಮ್ಮೇಗೌಡ ಎಂಬುವರ ಮಗಳು. ರಾತ್ರಿ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನ ಎದುರು ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೆ ಪೊಲೀಸರು ದೌಡಾಯಿಸಿ ಮೃತದೇಹವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು.
ಸ್ಪುರದ್ರೂಪಿ ಯುವತಿಯಾದ ಈಕೆ ಏಕಾಎಕಿ ರೈಲ್ವೆ ನಿಲ್ದಾಣಕ್ಕೆ ಬಂದು ಈ ರೀತಿಯ ಕೃತ್ಯಕ್ಕೆ ಒಳಗಾಗಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.