ಕರ್ನಾಟಕ

karnataka

ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸರಳತೆ ಮೆರೆದ ಆರಗ ಜ್ಞಾನೇಂದ್ರ

By

Published : Sep 20, 2021, 1:26 PM IST

Updated : Sep 20, 2021, 5:14 PM IST

Araga Jnanendra
ಆರಗ ಜ್ಞಾನೇಂದ್ರ ()

ನಿನ್ನೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಒಂದು ವರ್ಷದ ಮೊಮ್ಮಗನಿಗೆ ಆರೋಗ್ಯದಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ತೀರ್ಥಹಳ್ಳಿಯ ಸರ್ಕಾರಿ ಜೆ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರು.

ಶಿವ​ಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅನಾರೋಗ್ಯಕ್ಕೊಳಗಾದ ತಮ್ಮ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಸರಳತೆ ಮೆರೆದಿದ್ದಾರೆ.

ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಆರಗ ಜ್ಞಾನೇಂದ್ರ

ನಿನ್ನೆ ಸಚಿವರ ಒಂದು ವರ್ಷದ ಮೊಮ್ಮಗನಿಗೆ ಆರೋಗ್ಯದಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸ ಕಂಡು ಬಂದಿತು. ಹೀಗಾಗಿ ಮೊಮ್ಮಗನನ್ನು ತೀರ್ಥಹಳ್ಳಿಯ ಸರ್ಕಾರಿ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದರು. ನಂತರ ಕೊರೊನಾ ವಾರ್ಡ್​ಗೆ ಭೇಟಿ ನೀಡಿ, ಸೋಂಕಿತರ ಆರೋಗ್ಯ ವಿಚಾರಿಸಿದರು.

ಸಣ್ಣಪುಟ್ಟ ಹುದ್ದೆಯಲ್ಲಿದ್ದುಕೊಂಡವರೇ ಪ್ರಭಾವ ಬೀರಿ ಮೆಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ತಮ್ಮ ಮೊಮ್ಮಗನಿಗೆ ಗೃಹ ಸಚಿವರು ಚಿಕಿತ್ಸೆ ಕೊಡಿಸಿರುವುದಕ್ಕೆ ಸಾರ್ವಜನಿಕರಿಂದ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

Last Updated :Sep 20, 2021, 5:14 PM IST

ABOUT THE AUTHOR

...view details