ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ತೀರ್ಥಹಳ್ಳಿಯ ವಿವಿಧ ಪೊಲೀಸ್ ಠಾಣೆಗೆ ಭೇಟಿ ನೀಡಿ ಆಯುಧ ಪೂಜೆಯಲ್ಲಿ ಭಾಗಿಯಾದರು. ಇವರು ತೀರ್ಥಹಳ್ಳಿಯ ಡಿವೈಎಸ್ಪಿ ಕಚೇರಿ, ಪೊಲೀಸ್ ಠಾಣೆಗೆ ಭೇಟಿ ನೀಡಿ ಆಯುಧಪೂಜೆಯಲ್ಲಿ ಪಾಲ್ಗೊಂಡರು.
ಬಳಿಕ ಪೊಲೀಸ್ ಸಿಬ್ಬಂದಿಗಳಿಗೆ ಶುಭಾಶಯಗಳನ್ನು ತಿಳಿಸಿ ಬಳಿಕ ಮಾತನಾಡಿದ ಅವರು, ನಿಮ್ಮ ಕರ್ತವ್ಯಕ್ಕೆ ನಾವೆಂದೂ ಅಡ್ಡಿಯಾಗುವುದಿಲ್ಲ. ನಿಮ್ಮ ಕೈಗೆ ಶಕ್ತಿ ನೀಡುವಂತಹ ಕೆಲಸ ಮಾಡುತ್ತೇನೆ. ಬ್ರಿಟೀಷರ ಕಾಲದ ಪೊಲೀಸ್ ಠಾಣೆ ಬೀಳುವ ಸ್ಥಿತಿಗೆ ತಲುಪಿದ್ದು, ಅದನ್ನು ಕೆಡವಿ ಮರು ನಿರ್ಮಾಣ ಹಣ ಬಿಡುಗಡೆ ಮಾಡಿದ್ದೇನೆ. ನಿಮ್ಮ ಕರ್ತವ್ಯ ಚೆನ್ನಾಗಿ ನಿರ್ವಹಿಸಿ ಎಂದು ಹೇಳಿದರು.