ಕರ್ನಾಟಕ

karnataka

ಸಾಗರ : ಅಕ್ರಮವಾಗಿ ಗೋಮಾಂಸ ಮಾರುತ್ತಿದ್ದವನ ಬಂಧನ..

By

Published : Apr 4, 2022, 4:22 PM IST

beef-meat-sales-accused-arrested-by-police-in-shimoga

ಹಬೀಬ್ ಬೈಕ್​ನಲ್ಲಿ ಗೌತಮಪುರಕ್ಕೆ ಬರುತ್ತಿದ್ದ ಹಾಗೆಯೇ ಸಾಗರ ಪೊಲೀಸರು ದಾಳಿ ನಡೆಸಿ, ಸುಮಾರು 8 ಕೆ.ಜಿಯಷ್ಟು ಗೋಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಮಾಂಸ ಸಾಗಾಟ ಮಾಡಲು ಬಳಸುತ್ತಿದ್ದ ಬೈಕ್ ಸಮೇತ ಆರೋಪಿಯನ್ನು ಬಂಧಿಸಿ, ಸಾಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ..

ಶಿವಮೊಗ್ಗ: ಅಕ್ರಮವಾಗಿ ಗೋ ಮಾಂಸವನ್ನು ಮಾರಾಟ ಮಾಡುತ್ತಿದ್ದವನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ಶಿಕಾರಿಪುರ ಮೂಲದ ಹಬೀಬ್ (35) ಎಂಬಾತ ಬೈಕ್​​ನಲ್ಲಿ ಗೋ ಮಾಂಸವನ್ನು ತಂದು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಗ್ರಾಮದ ಯುವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಕ್ರಮವಾಗಿ ಗೋಮಾಂಸ ಮಾರುತ್ತಿದ್ದವನ ಬಂಧನ..

ಹಬೀಬ್ ಬೈಕ್​ನಲ್ಲಿ ಗೌತಮಪುರಕ್ಕೆ ಬರುತ್ತಿದ್ದ ಹಾಗೆಯೇ ಸಾಗರ ಪೊಲೀಸರು ದಾಳಿ ನಡೆಸಿ, ಸುಮಾರು 8 ಕೆಜಿಯಷ್ಟು ಗೋಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಮಾಂಸ ಸಾಗಾಟ ಮಾಡಲು ಬಳಸುತ್ತಿದ್ದ ಬೈಕ್ ಸಮೇತ ಆರೋಪಿಯನ್ನು ಬಂಧಿಸಿ, ಸಾಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓದಿ:ವ್ಯಾಯಾಮ ಮಾಡುವಾಗ ಮಹಿಳೆ ಸಾವು‌ ಪ್ರಕರಣ : ಘಟನೆಗೆ ನಿಖರ ಕಾರಣ ಇದು

TAGGED:

ABOUT THE AUTHOR

...view details