ಶಿವಮೊಗ್ಗ:ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯೋರ್ವರ ಚಿನ್ನದ ಸರ ಎಗರಿಸಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ಗಣಪತಿ ಕೆರೆ ಬಳಿ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಕೆಟಿಎಂ ಬೈಕ್ನಲ್ಲಿ ಬಂದ ಖದೀಮರು, 25 ಗ್ರಾಂನ ಮಾಂಗಲ್ಯ ಸರ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ.