ಕರ್ನಾಟಕ

karnataka

ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ

By

Published : Jan 15, 2022, 7:05 AM IST

home minister araga jnanendra

ಬೈಕ್​ವೊಂದು ಹಸುವಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮೇಲೆ ಗಾಯಗೊಂಡು ಬಿದ್ದಿದ್ದ ಮೂವರನ್ನು ಸ್ವತಃ ತಾವೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಿನ್ನೆ ತೀರ್ಥಹಳ್ಳಿಗೆ ವಾಪಸ್​ ಆಗುತ್ತಿದ್ದ ವೇಳೆ ಬಿ.ಆರ್.ಪಿ ಬಳಿಯ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ದ್ವಿಚಕ್ರವಾಹನ ಸವಾರರನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದ ಗೃಹ ಸಚಿವರು, ನಿನ್ನೆ ಸಂಜೆ ತೀರ್ಥಹಳ್ಳಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಬಿ.ಆರ್.ಪಿ ಬಳಿಯ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಹಸುವಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಡ- ಹೆಂಡತಿ ಹಾಗೂ ಮಗು ಗಾಯಗೊಂಡಿದ್ದರು.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ

ಇದನ್ನು ಗಮನಿಸಿದ ಆರಗ ಜ್ಞಾನೇಂದ್ರ, ತಮ್ಮ ಕಾರನ್ನು ನಿಲ್ಲಿಸಿ, ಸ್ವತಃ ತಾವೇ ಗಾಯಾಳುಗಳನ್ನು ಉಪಚರಿಸಿ, ಅವರ ವಾಹನದಲ್ಲೇ ಆಸ್ಪತ್ರೆಗೆ ಕರೆದು‌ಕೊಂಡು ಹೋಗಿ ಚಿಕಿತ್ಸೆ ಕೊಡಿಸಿ, ಮಾನವೀಯತೆ ಮೆರೆದಿದ್ದಾರೆ.

ಸಚಿವರು ಗಾಯಾಳುಗಳನ್ನು‌ ತಾವೇ ಖುದ್ದು ಆಸ್ಪತ್ರೆಗೆ ಕರೆದು‌ಕೊಂಡು ಹೋಗಿ ಚಿಕಿತ್ಸೆ ಕೊಡಿಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿವೆ.

ಓದಿ:ವಿಷಾಹಾರ ಸೇವಿಸಿ ಇಂದಿರಾಗಾಂಧಿ ವಸತಿ ಶಾಲೆಯ 50 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ABOUT THE AUTHOR

...view details