ಕರ್ನಾಟಕ

karnataka

ಶಿವಮೊಗ್ಗ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ.. ಕೊಲೆ ಶಂಕೆ

By

Published : Oct 3, 2022, 6:29 PM IST

a-youth-found-dead-after-missing
ಶಿವಮೊಗ್ಗ : ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ.. ಕೊಲೆ ಶಂಕೆ ()

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಯುವಕನ ಸಂಬಂಧಿಕರು ಕೊಲೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

ಶಿವಮೊಗ್ಗ:ಕಳೆದ ಮೂರು‌ ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಇಲ್ಲಿನ ಅನ್ವರ್ ಕಾಲೋನಿಯ ಜಮೀರ್(19)ಎಂಬುವವನೇ ಮೃತ ಯುವಕ.

ಜಮೀರ್ ಇತ್ತೀಚಿಗೆ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕೆಲಸಕ್ಕೆ ಸೇರಿದ್ದ. ಈತ ಟಿವಿ ರಿಪೇರಿಗೆಂದು ದೇವರನರಸೀಪುರಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದನು. ಜಮೀರ್ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈತನ ಮೊಬೈಲ್​ ಸ್ವಿಚ್ಡ್​ ಆಫ್ ಆಗಿತ್ತು.‌

ಶಿವಮೊಗ್ಗ : ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ.. ಕೊಲೆ ಶಂಕೆ

ಮೊಬೈಲ್ ಸ್ವಿಚ್ಡ್​ ಆಫ್ ಆದ ಕಾರಣ ಈತನ ಪೋಷಕರು ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ಈತನ ಪೋಷಕರು ಕೊಲೆ ಎಂದು ಆರೋಪಿಸಿದ್ದಾರೆ.

ಜಮೀರ್ ಮುಖದ ಮೇಲೆ ಗಾಯಗಳಾಗಿದ್ದು, ಇದು ಕೊಲೆ ಎಂದು ಜಮೀರ್ ಸಂಬಂಧಿಗಳು ಹಾಗೂ ಸ್ನೇಹಿತರು ಯುವಕನ ಶವವನ್ನು ಭದ್ರಾವತಿಯ ಹಾಲಪ್ಪ ವೃತ್ತದಲ್ಲಿಟ್ಟು ಪ್ರತಿಭಟನೆ ನಡೆಸಿದರು. ಜೊತೆಗೆ ಹೊಸಮನೆ ಪೊಲೀಸ್ ಠಾಣೆ ಮುಂದೆಯೂ ಪ್ರತಿಭಟನೆ ನಡೆಸಿದರು. ಸದ್ಯ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ :ಅಕ್ರಮವಾಗಿ ರಸಗೊಬ್ಬರ ದಾಸ್ತಾನಿರಿಸಿದ್ದ ಶೆಡ್​​ ಮೇಲೆ ಪೊಲೀಸರ ದಾಳಿ: 510 ರಸಗೊಬ್ಬರ ಚೀಲ ವಶ

ABOUT THE AUTHOR

...view details