ಕರ್ನಾಟಕ

karnataka

ಕಾಂಗ್ರೆಸ್​​ನಲ್ಲಿ ಭವಿಷ್ಯದ ಸಿಎಂ ಹೆಸರು ಪ್ರಸ್ತಾಪಿಸುವುದು ಅಪ್ರಸ್ತುತ: ಟಿ.ಬಿ. ಜಯಚಂದ್ರ

By

Published : Jul 29, 2021, 3:37 PM IST

ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಬಣಗಳಿಲ್ಲ. ಕಾಂಗ್ರೆಸ್ ಪಕ್ಷ ಎಂದರೆ ಒಂದೇ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

Former Minister TB Jayachandra
ಮಾಜಿ ಸಚಿವ ಟಿ.ಬಿ.ಜಯಚಂದ್ರ

ತುಮಕೂರು:ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು? ಎಂಬುದನ್ನು ಪ್ರಸ್ತಾಪಿಸುವುದು ಅಪ್ರಸ್ತುತವಾಗಿದೆ. 2023ರಲ್ಲಿ ನಡೆಯುವ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿ ಬರುವಂತಹವರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ 125 ಶಾಸಕರನ್ನು ಗೆಲ್ಲಿಸಿಕೊಟ್ಟರೆ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದರು.

ಭವಿಷ್ಯದ ಸಿಎಂ ಹೆಸರು ಪ್ರಸ್ತಾಪಿಸುವುದು ಅಪ್ರಸ್ತುತ- ಮಾಜಿ ಸಚಿವ ಟಿ.ಬಿ.ಜಯಚಂದ್ರ

ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಬಣಗಳಿಲ್ಲ. ಕಾಂಗ್ರೆಸ್ ಪಕ್ಷ ಎಂದರೆ ಒಂದೇ. ಪಕ್ಷದಲ್ಲಿ ನಾಲ್ಕೈದು ಬಣಗಳು ಇದೆಯೆಂಬುದನ್ನು ವಾಟ್ಸ್​​ಆ್ಯಪ್ ಹಾಗು ಮಾಧ್ಯಮಗಳಲ್ಲಿ ಸೃಷ್ಟಿಯಾಗಿರುವುದು. ಜನರಿಗೆ ನಾನು ಸ್ಪಷ್ಟಪಡಿಸುತ್ತಿದ್ದೇನೆ.

ಇದನ್ನೂ ಓದಿ:‘ಯಡಿಯೂರಪ್ಪರದ್ದು ಭ್ರಷ್ಟ ಆಡಳಿತ’: ‘ಜನಪೀಡಕ ಸರ್ಕಾರ’ ಕಿರುಹೊತ್ತಿಗೆ ಬಿಡುಗಡೆಗೊಳಿಸಿ ಸಿದ್ದು ವಾಗ್ದಾಳಿ

ABOUT THE AUTHOR

...view details