ಕರ್ನಾಟಕ

karnataka

ಉತ್ತರ ಕನ್ನಡ ಜಿಲ್ಲೆಗೂ ಕಾಲಿಟ್ಟ ಚರ್ಮ ಗಂಟು ರೋಗ: ಶಿರಸಿಯೊಂದರಲ್ಲೇ 40ಕ್ಕೂ ಅಧಿಕ ಪ್ರಕರಣ ದಾಖಲು

By

Published : Oct 14, 2022, 5:37 PM IST

ಉತ್ತರ ಕನ್ನಡ ಜಿಲ್ಲೆಯ ಶಿರಸಿಯೊಂದರಲ್ಲೇ ಹೆಚ್ಚಿನ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದು, ಈ ಕುರಿತು ಸರ್ಕಾರ ಸಮೀಕ್ಷೆ ನಡೆಸಿ ಕೂಡಲೇ ಔಷಧ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

kn_srs_01_g
ಚರ್ಮ ಗಂಟು ರೋಗ

ಶಿರಸಿ: ರಾಜ್ಯದ ವಿವಿಧ ಭಾಗದಲ್ಲಿ ಜಾನುವಾರುಗಳಿಗೆ ಕಾಣಿಸಿಕೊಳ್ಳುತ್ತಿರುವ ಚರ್ಮಗಂಟು ಅಥವಾ ಚರ್ಮ ಮುದ್ದೆ ರೋಗ ಇದೀಗ ಉತ್ತರ ಕನ್ನಡ ಜಿಲ್ಲೆಗೂ ಕಾಲಿಟ್ಟಿದ್ದು, ಅದರಲ್ಲೂ ಶಿರಸಿ ಭಾಗದಲ್ಲೇ 40ಕ್ಕೂ ಅಧಿಕ ಪ್ರಕರಣ ಕಾಣಿಸಿಕೊಂಡಿದ್ದು, ಹೈನುಗಾರರ ನಿದ್ದೆಗೆಡಿಸಿದೆ.‌

ಚರ್ಮಗಂಟು ರೋಗ ಅಥವಾ ಚರ್ಮ ಮುದ್ದೆ ರೋಗ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಕ್ಯಾಪ್ರಿಫಾಕ್ಸ್ (ಫಾಕ್ಸ್ ಎರೀಡೆ) ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ ಕರುಗಳಲ್ಲಿ ಅತಿಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅತಿಯಾದ ಜ್ವರ (105°F– 108°F) ಕಣ್ಣುಗಳಿಂದ ನೀರು ಸೋರುವುದು, ನಿಶಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕುಂಟುವುದು ಜಾನುವಾರುಗಳ ಚರ್ಮದ ಮೇಲೆ 2-5ಸೆ.ಮೀ ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಇದಕ್ಕೆ ವಾಕ್ಸಿನ್ ಇದ್ದರೂ ಸಹ ಅದರ ಬದಲಿಗೆ ಸಂಪೂರ್ಣ ಗುಣವಾಗುವ ಔಷಧ ಬೇಕು ಎಂದು ಹೈನುಗಾರರು ಒತ್ತಾಯಿಸಿದ್ದಾರೆ.

ಶಿರಸಿಯಲ್ಲಿ 40ಕ್ಕೂ ಹೆಚ್ಚು ಚರ್ಮ ಗಂಟು ರೋಗ ಪತ್ತೆ

ಇನ್ನು ಈ ಚರ್ಮ ಗಂಟು ರೋಗ, ಸೊಳ್ಳೆ, ಉಣ್ಣೆ, ನೊಣ ಹಾಗೂ ವಿವಿಧ ಕೀಟಗಳ ಕಚ್ಚುವಿಕೆಯಿಂದಲೂ ಬರುತ್ತಿದ್ದು, ಕಲುಷಿತಗೊಂಡ ನೀರು ಹಾಗೂ ಆಹಾರ ಸೇವನೆಯಿಂದಲೂ ಬರುತ್ತಿದೆ. ರೋಗಕ್ಕೊಳಗಾದ ಜಾನುವಾರುಗಳ ನೇರ ಸಂಪರ್ಕದಿಂದಲೂ ರೋಗ ಹರಡುವಿಕೆ ಪ್ರಮಾಣ ಶೇ.10-20 ರಷ್ಟಿದ್ದು, ಸಾವಿನ ಪ್ರಮಾಣ ಶೇ.1-5ರಷ್ಟು ಇರುತ್ತದೆ. ಇದಕ್ಕಾಗಿ ಮಾಡಿರುವ ವಾಕ್ಸಿನ ಸಹ ಶಿರಸಿಯಲ್ಲಿ ಸರಿಯಾಗಿ ವ್ಯವಸ್ಥೆ ಆಗದಿರುವುದು ಹೈನುಗಾರರ ಸಮಸ್ಯೆಗೆ ಕಾರಣವಾಗಿದೆ. ಈ ಕುರಿತು ಸರ್ಕಾರ ಸಮೀಕ್ಷೆ ನಡೆಸಿ, ಕೂಡಲೇ ಮನೆ ಮನೆಗೆ ತೆರಳಿ ಸೂಕ್ತ ಔಷಧ ನೀಡಬೇಕು ಎಂದು ಸ್ಥಳೀಯರ ಆಗ್ರಹಿಸಿದ್ದಾರೆ.‌

ಇದನ್ನೂ ಓದಿ:ಜಾನುವಾರುಗಳಲ್ಲಿ ಲಂಪಿ ಚರ್ಮ ಗಂಟು ರೋಗ: ತಕ್ಷಣ ಪಶುವೈದ್ಯರನ್ನು ಸಂಪರ್ಕಿಸಲು ಸೂಚನೆ

ABOUT THE AUTHOR

...view details