ಕಾರವಾರ (ಉ.ಕ): ಕೃಷಿಕರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದಕ್ಕೆ ಚಾಲನೆ ನೀಡಿದ ಕಾರವಾರ - ಅಂಕೋಲಾ ಶಾಸಕಿ ರೂಪಾಲಿ ನಾಯ್ಕ್ ಬಳಿಕ ಟ್ರ್ಯಾಕ್ಟರ್ ಚಲಾಯಿಸಿ ಗಮನ ಸೆಳೆದಿದ್ದಾರೆ.
ಅಂಕೋಲಾ ತಾಲೂಕಿನ ವಂದಿಗೆ ಗ್ರಾಮದಲ್ಲಿ ಜೈ ಮಾತಾ ಅಗ್ರೋ ಮತ್ತು ಡೈರಿ ಫಾರ್ಮ್ಸ್ ಹಾಗೂ ಶಾಸಕಿ ರೂಪಾಲಿ ನಾಯ್ಕ್ ಆಯೋಜಿಸಿದ್ದ ‘ಫಲವತ್ತತೆಯೆಡೆಗೆ ಮೊದಲ ಹೆಜ್ಜೆ’ ಎಂಬ ಕೃಷಿ ಕಾರ್ಯಾಕ್ರಮಕ್ಕೆ ಚಾಲನೆ ನೀಡಿದ ಅವರು ಬಳಿಕ ಟ್ರ್ಯಾಕ್ಟರ್ ಚಲಾವಣೆ ಮಾಡಿ ಗಮನ ಸೆಳೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜನತೆ ಕೃಷಿಯಿಂದ ದೂರ ಸರಿಯುತ್ತಿರುವ ಹಿನ್ನೆಲೆ ಅವರ ಪ್ರೋತ್ಸಾಹಿಸುವ ಮತ್ತು ಹೊಸ ಯಂತ್ರಗಳ ಸಹಕಾರದಲ್ಲಿ ಕೃಷಿಕರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಗ್ರಾಮದ ಜನರು ಪಡೆದುಕೊಳ್ಳಬೇಕು. ದೇಶಕ್ಕೆ ಕೃಷಿಯೇ ಬೆನ್ನೆಲುಬಾಗಿದ್ದು, ಯುವಕರು ತಮ್ಮ ಭೂಮಿಗಳನ್ನು ಬಂಜರು ಬಿಡದೇ ಕೃಷಿ ಚಟುವಟಿಕೆ ನಡೆಸಿ ಉತ್ತಮ ಬೆಳೆ ಬೆಳೆಯಲು ಪ್ರಯತ್ನಿಸಬೇಕು ಎಂದಿದ್ದಾರೆ.
ಓದಿ:ಮೈಸೂರು ವಿವಿ ಉತ್ತರ ಪತ್ರಿಕೆ ಸೋರಿಕೆ ಪ್ರಕರಣ: ಅಕ್ರಮದ 'ಕೀಲಿ ಕೈ' ಬಂಧನ