ಕಾರವಾರ (ಉತ್ತರ ಕನ್ನಡ):ಕೆಮಿಕಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡು ಅಪಾರ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಯಲ್ಲಾಪುರ ಇಡಗುಂದಿಯ ಆರ್ತಿಬೈಲ್ ಕ್ರಾಸ್ ಬಳಿ ಮುಂಜಾನೆ ನಡೆದಿದೆ.
ಕೆಮಿಕಲ್ ಟ್ಯಾಂಕರ್ ಸ್ಫೋಟಗೊಂಡಿದೆ ಎನ್ನಲಾಗುತ್ತಿದ್ದರೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಬೆಂಕಿ ಹೊತ್ತಿಕೊಂಡ ಕಾರಣ ತಕ್ಷಣ ಏನಾಗಿದೆ ಅನ್ನೋ ಮಾಹಿತಿ ಸಿಗದೇ ಅಧಿಕಾರಿಗಳು ಕೂಡ ಗೊಂದಲದಲ್ಲಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯ ಪೊಲೀಸರು ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
Last Updated :Oct 13, 2021, 12:30 PM IST