ಕರ್ನಾಟಕ

karnataka

ಗಡಿ ಖ್ಯಾತೆ ಮಹಾರಾಷ್ಟ್ರ ರಾಜಕಾರಣಿಗಳ ವೋಟಿಂಗ್ ಪಾಲಿಟಿಕ್ಸ್: ಯತ್ನಾಳ್

By

Published : Dec 7, 2022, 4:13 PM IST

Basanagowda Patil

ಮಹಾಜನ್ ವರದಿಯನ್ನು ಮಹಾರಾಷ್ಟ್ರ ಸರ್ಕಾರವೇ ರಚನೆ ಮಾಡಿತ್ತು. ಆದರೆ, ಅದು ಕರ್ನಾಟಕದ ಪರವಾಗಿದೆ ಎಂದು ಒಪ್ಪಿಲ್ಲ. ದೇಶದಲ್ಲಿ ಶಾಂತಿಯಿಂದ ಇರಬೇಕೆಂಬ ಇಚ್ಛೆ ಮಹಾರಾಷ್ಟ್ರದವರಿಗಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಹೇಳಿದರು.

ವಿಜಯಪುರ: ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಖ್ಯಾತೆ ವಿಚಾರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್, ಮಹಾರಾಷ್ಟ್ರದ ವಿರುದ್ಧ ಕಿಡಿಕಾರಿದರು. ವಿಜಯಪುರದಲ್ಲಿ ಮಾತನಾಡುತ್ತಾ, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಇದೇ ರೀತಿಯ ಖ್ಯಾತೆಯನ್ನು ಹಿಂದಿನಿಂದಲೂ ತೆಗೆದುಕೊಂಡು ಬಂದಿದೆ. ಕರ್ನಾಟಕ ಮಹಾರಾಷ್ಟ್ರ ಕನ್ನಡ ಮರಾಠಿ ಎಂಬ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಬಂದಿದ್ದಾರೆ. ಈ ಮೂಲಕ ಮಹಾರಾಷ್ಟ್ರದವರು ದೇಶದಲ್ಲಿ ಅಶಾಂತಿಯನ್ನು ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ವೋಟ್ ಬ್ಯಾಂಕ್​ಗಾಗಿ ಮಾಡುತ್ತಿರುವ ಕುತಂತ್ರ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ, ಎಂಇಎಸ್ ಇರಬಹುದು. ಇವರೆಲ್ಲ ವೋಟ್​ಗಾಗಿ ರಾಜಕಾರಣ ಮಾಡುತ್ತಿದ್ದಾರೆ. ಮಹಾಜನ್ ಆಯೋಗದ ವರದಿ ಒಪ್ಪುವುದೇ ಇದಕ್ಕೆ ಒಂದೇ ಪರಿಹಾರ ಎಂದರು.

ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್

ಪ್ರಧಾನಿ ಮಾರ್ಗದರ್ಶನದಲ್ಲಿ ಚುನಾವಣೆ: ಗುಜರಾತ್​​ ಚುನಾವಣೆ ಬಗ್ಗೆ ನಡೆದಿರುವ ಸಮೀಕ್ಷೆಯಂತೆ ಬಿಜೆಪಿ ಬಹುಮತ ಸಾಧಿಸಲಿದೆ. ಇದೇ ರೀತಿ ಮುಂದೆ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನೂ ಮೋದಿ ನೇತ್ವತೃದಲ್ಲಿ ಎದುರಿಸಿ 130-40 ಸ್ಥಾನಗಳಿಸಿ ಬಹುಮತ ಸಾಧಿಸಲಿದ್ದೇವೆ. ಅವಧಿಗೂ ಮುನ್ನವೇ ಕರ್ನಾಟಕದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇಲ್ಲ ಎಂದು ಹೇಳಿದರು.

ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಸಮೀಕ್ಷೆಗಳು ಹೇಳಿವೆ. ಇದೇ ಮಾದರಿ ಕರ್ನಾಟಕ ಚುನಾವಣೆಯಲ್ಲಿಯೂ ನಡೆಯಬಹುದೇ ಎನ್ನುವ ಪ್ರಶ್ನೆಗೆ ಉತ್ತರಿಸಿ, ರಾಜ್ಯದ ಪ್ರತಿ ಮತಕ್ಷೇತ್ರದ ಶಾಸಕರ ರಿಪೋರ್ಟ್ ಕಾರ್ಡ್ ಮೋದಿ ಬಳಿ ಇದೆ. ಹೈಕಮಾಂಡ್ ಸಹ ತನ್ನದೇ ಆದ ಸಮೀಕ್ಷೆ ನಡೆಸಿದೆ. ಹೊಸ ಮುಖಗಳಿಗೆ ಅವಕಾಶ ನೀಡಬಯಸಿದರೆ ಅವರ ನಿರ್ಧಾರಕ್ಕೆ ರಾಜ್ಯ ಬಿಜೆಪಿ ಶಾಸಕರು ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.

2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಕಲಿ ಹೋರಾಟ ಮಾಡುತ್ತಿದೆ ಎಂದು ನಟ ಹಾಗೂ ಹೋರಾಟಗಾರ ಚೇತನ್ ನೀಡಿದ ಹೇಳಿಕೆಗೆ ಯತ್ನಾಳ ಆಕ್ರೋಶ ವ್ಯಕ್ತಪಡಿಸಿ, ಇಲ್ಲಿಯವರೆಗೆ ಅಂಬೇಡ್ಕರ್ ಅವರ ವಿಚಾರಗಳನ್ನು ಮುಚ್ಚಿಟ್ಟಿದ್ದೇ ದುರಂತ. ಅಂಬೇಡ್ಕರ್ ಅವರ ಜೀವನ ಮತ್ತು ಅವರ ಸಾಹಿತ್ಯವನ್ನು ಎಲ್ಲರೂ ಅಧ್ಯಯನ ಮಾಡಬೇಕಿದೆ.‌ ಕೆಲ ಜನರು ತಮ್ಮ ಉಪ ಜೀವನಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ:ಬೆಳಗಾವಿ ಅಧಿವೇಶನದಲ್ಲಿ ವಚನಾನಂದ ಶ್ರೀಗಳ ಅವ್ಯವಹಾರ ಬಯಲಿಗೆಳೆಯುವೆ: ಶಾಸಕ‌ ಬಸನಗೌಡ ಪಾಟೀಲ ಯತ್ನಾಳ್​

ABOUT THE AUTHOR

...view details