ವಿಜಯಪುರ :ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ಅದು ಕೇವಲ ರಾಜಕಾರಣದ ಮಾತು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.
ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತರನ್ನು ಮುಗಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರನ್ನು ಯಾರು ಮುಗಿಸಲು ಸಾಧ್ಯವಿಲ್ಲ. ಅದು ಕೇವಲ ರಾಜಕಾರಣದ ಮಾತಾಗಿದೆ ಎಂದರು.
ಮುಗಿದ ಅಧ್ಯಾಯ : ಕಾಂಗ್ರೆಸ್ ನಾಯಕರಾದ ಉಗ್ರಪ್ಪ ಹಾಗೂ ಸಲೀಂ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಡಿಕೆಶಿ ಅವರು, ಅದೊಂದು ಮುಗಿದ ಅಧ್ಯಾಯ ಎಂದು ಹೇಳಿದರು.
ಶಾಸಕ ಯತ್ನಾಳ ಸಿಡಿ ಪ್ರಕರಣ ಪ್ರತಿಕ್ರಿಯೆಗೆ ನಕಾರ : ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಡಿ ಪ್ರಕರಣದ ಕುರಿತು ಮಾತನಾಡಿ, ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಅದರ ಬಗ್ಗೆ ಹೇಗೆ ಮಾತನಾಡಲಿ. ವಿಷಯ ತಿಳಿದುಕೊಂಡು ಮಾತನಾಡುತ್ತೇನೆ ಎಂದರು.
TAGGED:
dk shivakumar sindagi visit