ಕರ್ನಾಟಕ

karnataka

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ: ಆತಂಕದಲ್ಲಿ ಜನತೆ

By

Published : Oct 20, 2021, 12:22 PM IST

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಾಬಾನಗರ ಸೇರಿ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತರಾದ ಜನತೆ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.

ವಿಜಯಪುರ: ಜಿಲ್ಲೆಯಲ್ಲಿ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ತಿಕೋಟಾ ತಾಲೂಕಿನ ಬಾಬಾನಗರ ಹಾಗು ಹಲವಾರು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ.

ಬೆಳಿಗ್ಗೆ 10:30 ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಭಯಭೀತರಾದ ಜನತೆ ಮನೆಯಿಂದ ಹೊರಗಡೆ ಓಡಿ ಬಂದರು. ನಡುಗಿದ ಭೂಮಿಯಿಂದ ಭಾರೀ ಸದ್ದು ಬರುತ್ತಿದೆ. ಅಲ್ಲದೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪನ‌ ಅನುಭವ ಆಗುತ್ತಿರುವ ಕಾರಣ ಜನರು ಆತಂಕದಲ್ಲಿ ವಾಸ ಮಾಡುವಂತಾಗಿದೆ.

ಇಂದು ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮಕ್ಕೆ ನ್ಯಾಶನಲ್ ಜಿಯೋಫಿಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​​​ನ ವಿಜ್ಞಾನಿಗಳ ತಂಡ ಭೇಟಿ ನೀಡಲಿದೆ.

ಇದನ್ನೂ ಓದಿ:ಮತ್ತೆ ವಿಜಯಪುರದಲ್ಲಿ ನಡುಗಿದ ಭೂಮಿ.. ಹೆದರಿ ಮನೆಯಿಂದ ಹೊರಗೆ ಓಡಿ ಬಂದ ಜನ..

ABOUT THE AUTHOR

...view details