ಕರ್ನಾಟಕ

karnataka

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ: ಆತಂಕದಲ್ಲಿ ಜನ

By

Published : Sep 3, 2022, 4:41 PM IST

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ. ಆತಂಕದಲ್ಲಿ ಜನರು

Earthquake hits again in vijayapur
Earthquake hits again in vijayapur

ವಿಜಯಪುರ:ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2 ರಷ್ಟು ತೀವ್ರತೆ ದಾಖಲಾಗಿದೆ. ಅರಕೇರಿ ಗ್ರಾಮ ಪಂಚಾಯಿತಿ, ಬರಟಗಿ ಪಂಚಾಯಿತಿ ವ್ಯಾಪ್ತಿ ಸೇರಿದಂತೆ ನಗರದ ಹಲವು ಬಡಾವಣೆಯಲ್ಲಿ ಭೂಕಂಪನ ಅನುಭವವಾಗಿದೆ.

ಶನಿವಾರ ಮಧ್ಯಾಹ್ನ 2.17ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ವಿಜಯಪುರ ತಾಲೂಕಿನ ಭೂತನಾಳ ತಾಂಡಾ ಕಂಪನದ ಕೇಂದ್ರ ಬಿಂದುವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಆಗಾಗ ಭೂಕಂಪನವಾಗುತ್ತಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ.

(ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪದ ಅನುಭವ.. ಭಯಭೀತರಾದ ಜನ)

ABOUT THE AUTHOR

...view details