ಕರ್ನಾಟಕ

karnataka

ಲಾರಿ, ಟವೇರಾ ನಡುವೆ ಡಿಕ್ಕಿ: ಇಬ್ಬರು ಕ್ರೀಡಾಪಟುಗಳ ಸಾವು

By

Published : Mar 17, 2021, 9:09 AM IST

Updated : Mar 17, 2021, 10:33 AM IST

ವಿಜಯಪುರದಲ್ಲಿ ರಸ್ತೆ ಅಪಘಾತ
Raod accident in Vijayapura

09:04 March 17

ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸಾವು

ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಕ್ರೀಡಾಪಟುಗಳು

ವಿಜಯಪುರ:ಕಬಡ್ಡಿ ಪ್ರೋ ಲೀಗ್ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಕ್ರೀಡಾಪಟುಗಳಿದ್ದ ಟವೇರಾ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಲ್ಹಾರ ಬಳಿ ನಡೆದಿದೆ.  

ಮೃತ ಕ್ರೀಡಾಪಟುಗಳನ್ನು ಸೋಹೆಲ್ (22) ಹಾಗೂ ಮಹಾದೇವ (20) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಬಾರಾಮಟ್ಟಿ ಜಿಲ್ಲೆಯ ಎಂಟು ಕ್ರೀಡಾ ಪಟುಗಳು ಟವೇರಾ ವಾಹನದಲ್ಲಿ ಬಾಗಲಕೋಟೆಯ ಜಿಲ್ಲೆಯ ತುಳಸಿಗೇರಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ, ಎದುರಿಗೆ ಬಂದ ಲಾರಿ ಡಿಕ್ಕಿಯಾಗಿ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು‌ ಜನ ಕ್ರೀಡಾಪಟುಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಓದಿ: ಸಿಡಿ ಪ್ರಕರಣ: ಕಿಂಗ್​​ ಪಿನ್​ಗಳ ಶೋಧ ಕಾರ್ಯಕ್ಕೆ ನಾಲ್ಕು ತಂಡ ರಚಿಸಿದ ಎಸ್​ಐಟಿ

ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Mar 17, 2021, 10:33 AM IST

ABOUT THE AUTHOR

...view details