ವಿಜಯಪುರ:ಕುಪಿತವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬ್ಯಾಕೋಡ ಗ್ರಾಮದಲ್ಲಿ ನಡೆದಿದೆ. ಮಾದೇವಿ ಪರಶುರಾಮ ಚೋರಗಸ್ತಿ(38) ಮೃತ ಮಹಿಳೆಯೆಂದು ತಿಳಿದುಬಂದಿದೆ. ದುಷ್ಕೃತ್ಯಕ್ಕೆ ನಿಖರ ಕಾರಣ ಲಭ್ಯವಾಗಿಲ್ಲ. ಸಿಂದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.