ಪಂಚರಾಜ್ಯ ಚುನಾವಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಸಂದರ್ಶನ ನೀಡಿದ್ದಾರೆ. ಈ ವೇಳೆ ಅನೇಕ ವಿಚಾರಗಳ ಬಗ್ಗೆ ಕೆಂದ್ರ ಸರ್ಕಾರದ ನಿಲುವು ಸ್ಪಷ್ಟ ಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಚುನಾವಣೆ ನಡೆಯುತ್ತಿರುವ ಎಲ್ಲ ಐದು ರಾಜ್ಯಗಳಲ್ಲಿ ನಮ್ಮ ಪಕ್ಷಕ್ಕೆ ಬಹುಮತ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ದೇಶದ ಎಲ್ಲ ರಾಜ್ಯಗಳೂ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿವೆ. ಆದರೆ ಒಂದು ರಾಜ್ಯ ಮಾತ್ರ ದೂರ ಉಳಿದಿದೆ. ಇದು ದೌರ್ಭಾಗ್ಯದ ಸಂಗತಿ. ಎಲ್ಲ ಜಿಲ್ಲೆಗಳ ಆಶೋತ್ತರಗಳನ್ನು ಗುರುತಿಸಿ, ಪ್ರೋತ್ಸಾಹಿಸಲು ಪ್ರಯತ್ನಿಸುತ್ತಿದ್ದೇವೆ ಎಂದರು.