ಕರ್ನಾಟಕ

karnataka

ಕಾಂಗ್ರೆಸ್​ನವರ ಭ್ರಷ್ಟಾಚಾರದ ಮಾತು ಭೂತದ ಬಾಯಲ್ಲಿ ಭಗವದ್ಗೀತೆಯಂತೆ: ಬಿ.ವೈ.ವಿಜಯೇಂದ್ರ

By

Published : Aug 16, 2023, 9:25 PM IST

ಬಿ.ವೈ ವಿಜಯೇಂದ್ರ

ಶಿವಮೊಗ್ಗ : ಕಾಂಗ್ರೆಸ್‌ನವರ ಬಾಯಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಕೇಳಿದ್ರೆ, ಭೂತದ ಬಾಯಿಯಲ್ಲಿ ಭಗವದ್ಗೀತೆ ಕೇಳಿದಂತಾಗುತ್ತದೆ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಹಲವು ಆರೋಪಗಳನ್ನು ಮಾಡಿತ್ತು. ಕಾಂಗ್ರೆಸ್ ಹಳೆಯ ಚಾಳಿ ಬಿಟ್ಟಿಲ್ಲ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈಗಾಗಲೇ ಸಚಿವರ ವಿರುದ್ಧ ಆರೋಪಗಳು ಕೇಳಿಬಂದಿವೆ. ಎರಡೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರದ ಪಾಪ್ಯುಲಾರಿಟಿ ಕಡಿಮೆ ಆಗಿದೆ. ಇದು ಅವರ ಸ್ವಯಂಕೃತ ಅಪರಾಧದ ಫಲ ಎಂದು ಹೇಳಿದರು.  

ರಾಜ್ಯ ಸರ್ಕಾರ ಸಾಲ‌ ಮಾಡುತ್ತಿದೆ. ಇವರು ರಾಜ್ಯದ ಆರ್ಥಿಕ ಶಿಸ್ತು ಉಲ್ಲಂಘನೆ ಮಾಡುತ್ತಿದ್ದಾರೆ. ಜನರು ಸರ್ಕಾರದ ಬಗ್ಗೆ ಹಾದಿಬೀದಿಯಲ್ಲಿ ಮಾತಾಡುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಮಾತನಾಡಿದ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಈಗ ಮಾತಾಡುತ್ತಿಲ್ಲ. ಸರ್ಕಾರಿ ನೌಕರರಿಗೆ ಸಂಬಳ‌ ಕೊಡಲೂ ಸಾಧ್ಯವಾಗುತ್ತಿಲ್ಲ. ಸಚಿವರು ಕರೆಂಟ್ ಕಡಿತ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ಆದರೆ ಈಗಾಗಲೇ ಲೋಡ್ ಶೆಡ್ಡಿಂಗ್ ಚಾಲ್ತಿಯಲ್ಲಿದೆ. ರೈತರಿಗೆ ನೀರು ಕೊಡಲೂ ಆಗುತ್ತಿಲ್ಲ. ಅಬ್ಬರದ ಪ್ರಚಾರದ ಮೇಲೆ ಸರ್ಕಾರ ಕಾಲ‌ ಕಳೆಯುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದರು.       

ಇದನ್ನೂ ಓದಿ :C.T.Ravi: ಯಾವ ಶಾಸಕರೂ ಬಿಜೆಪಿ ತೊರೆಯಲ್ಲ- ಸಿ.ಟಿ.ರವಿ

ABOUT THE AUTHOR

...view details