ಕರ್ನಾಟಕ

karnataka

ಪುತ್ತೂರಿನಲ್ಲಿ ಮತ್ತೆ ಝಳಪಿಸಿದ ತಲವಾರು: ಪುತ್ತಿಲ ಪರಿವಾರದವನ ಮೇಲೆ ಹಲ್ಲೆಗೆ ಯತ್ನ

By ETV Bharat Karnataka Team

Published : Nov 10, 2023, 7:32 PM IST

ಪುತ್ತೂರಿನಲ್ಲಿ ಮತ್ತೆ ಝಳಪಿಸಿದ ತಲವಾರು

ಪುತ್ತೂರು: ಮೊನ್ನೆ ತಾನೇ ಹುಲಿವೇಷಧಾರಿ ಅಕ್ಷಯ ಕಲ್ಲೇಗ ಹತ್ಯೆಯಿಂದ ಇನ್ನೂ ಚೇತರಿಸದ ಪುತ್ತೂರಿನಲ್ಲಿ ಮತ್ತೆ ತಲವಾರು ಝಳಪಿಸಿದೆ. ಪುತ್ತಿಲ ಪರಿವಾರ ಹಾಗೂ ಹಿಂದೂ ಜಾಗರಣ ವೇದಿಕೆ ಮುಖಂಡರ ನಡುವೆ ನಡೆದ ಮಾರಾಮಾರಿಯಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತನ ಮೇಲೆ ತಲವಾರು ದಾಳಿಯ ವಿಫಲ ಯತ್ನ ನಡೆದಿದೆ. ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಕಚೇರಿಗೆ ನುಗ್ಗಲೆತ್ನಿಸಿದ ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಹಾಗೂ ಎಂಟು ಮಂದಿಯಿದ್ದ ತಂಡವು ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಮೇಲೆ ತಲವಾರು ಹಲ್ಲೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ:ಪುತ್ತೂರು: ಟೈಗರ್ಸ್‌ ಕಲ್ಲೇಗ ಹುಲಿವೇಷ ತಂಡದ ಅಕ್ಷಯ್‌ ಕಲ್ಲೇಗ ಬರ್ಬರ ಹತ್ಯೆ; ಮೂವರ ಬಂಧನ

ಫೇಸ್​ಬುಕ್ ಪೋಸ್ಟ್ ವಿಚಾರದಲ್ಲಿ ಈ ಗಲಾಟೆ ನಡೆದಿರುವುದಾಗಿ ಶಂಕೆ ವ್ಯಕ್ತವಾಗಿದೆ. ಸದ್ಯ ಪುತ್ತೂರು ಠಾಣೆಯಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಪುತ್ತಿಲ ಪರಿವಾರದ ಕಾರ್ಯಕರ್ತರು ಜಮಾಯಿಸುತ್ತಿದ್ದಾರೆ. ತಲ್ವಾರ್ ತೋರಿಸಿದ ದಿನೇಶ್ ಪಂಜಿಗನನ್ನು ವಶಕ್ಕೆ ಪಡೆದಿರುವ ಪುತ್ತೂರು ಪೊಲೀಸರು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಅಕ್ಷಯ್ ಕಲ್ಲೇಗ ಕೊಲೆ ಕೇಸ್: ಆರೋಪಿಗಳು ಮಾದಕ ಪದಾರ್ಥ ಸೇವಿಸಿರುವ ಮಾಹಿತಿ ಇಲ್ಲ-ಎಸ್​ಪಿ

ABOUT THE AUTHOR

...view details