ಕರ್ನಾಟಕ

karnataka

ಮಾದಪ್ಪನ ದೇವಾಲಯದಲ್ಲಿ 528 ಕೆಜಿ ತೂಕದ ಬೆಳ್ಳಿ ರಥ.. ಇಂದಿನಿಂದ ಬೆಳ್ಳಿ ರಥ ಸೇವೆ

By

Published : Jun 25, 2023, 4:22 PM IST

ಬೆಳ್ಳಿ ರಥ

ಚಾಮರಾಜನಗರ : ಕರ್ನಾಟಕದ ಪ್ರಮುಖ ದೇಗುಲಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಬೆಳ್ಳಿ ರಥ ಸೇವೆ ಆರಂಭವಾಗಿದೆ. ಕೆಲವು ತಿಂಗಳುಗಳ ಹಿಂದೆಯಷ್ಟೇ ಅಂದಿನ‌ ಸಿಎಂ ಬಸವರಾಜ ಬೊಮ್ಮಾಯಿ ಸಾಂಕೇತಿಕವಾಗಿ ರಥ ಉದ್ಘಾಟನೆ ಮಾಡಿದ್ದರು. ಇದೀಗ ರಥ ನಿರ್ಮಾಣ ಕಾಮಗಾರಿ ಸಂಪೂರ್ಣ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದಿನಿಂದ ಬೆಳ್ಳಿ ರಥ ಸೇವೆ ಆರಂಭಗೊಂಡಿದೆ. 

ಭಕ್ತರು ಪ್ರತಿದಿನ ಬೆಳಗ್ಗೆ 2001 ಸಾವಿರ ರೂ. ಶುಲ್ಕ ಕೊಟ್ಟು ಬೆಳ್ಳಿ ರಥ ಸೇವೆ ಮಾಡಿಸಬಹುದಾಗಿದೆ. ಈಗಾಗಲೇ, ದೇವಾಲಯದಲ್ಲಿ ಸಂಜೆ ಹೊತ್ತು ಚಿನ್ನದ ರಥ ಸೇವೆ ನಡೆಯಲಿದೆ. ಬೆಳ್ಳಿ ರಥ ಲೋಕಾರ್ಪಣೆ ವೇಳೆ ಸಾಲೂರು ಮಠದ ಸ್ವಾಮೀಜಿ, ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿದೇವಿ ಹಾಗೂ ಸೆಸ್ಕ್ ಎಂಡಿ ಜಯವಿಭವಸ್ವಾಮಿ ಉಪಸ್ಥಿತರಿದ್ದರು. ರಾಜ್ಯದಲ್ಲೇ ಅತಿಹೆಚ್ಚು ಆದಾಯ ಪಡೆಯುವ ಎರಡನೇ ದೇವಾಲಯ ಇದಾಗಿದ್ದು, ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ.      

ಇದನ್ನೂ ಓದಿ :ಮನೆಗೆ ಬಾರದ ಗಂಗೆ.. ಹಳ್ಳದ ನೀರನ್ನೇ ಕುಡಿಯುತ್ತಿರುವ ಗ್ರಾಮಸ್ಥರು

ABOUT THE AUTHOR

...view details