ಜಿಲ್ಲೆಯಾದ್ಯಂತ ಶನಿವಾರ ರಾತ್ರಿಯಿಡೀ ವರುಣನ ಆರ್ಭಟ ಜೋರಾಗಿತ್ತು. ಬಸವನ ಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಸುರಿದಿದೆ. ಅಕಾಲಿಕ ಮಳೆಯಿಂದಾಗಿ ಜನಜೀವನಕ್ಕೆ ತೊಂದರೆಯಾಗಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ಇತರೆ ಬೆಳೆಗಳು ಹಾನಿಗೀಡಾಗುವ ಆತಂಕದಲ್ಲಿ ರೈತರಿದ್ದಾರೆ.