ಚಿಕಾಲಗುಡ್ಡ ಗ್ರಾಮದ 10ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
By
Published : Oct 20, 2020, 8:58 AM IST
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಚಿಕಾಲಗುಡ್ಡ ಗ್ರಾಮದ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಪರಿಣಾಮ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಸೋಯಾಬಿನ್ ಬೆಳೆ ಹಾಗೂ ದವಸ ಧಾನ್ಯಗಳು ನೀರುಪಾಲಾಗಿದ್ದು, ರೈತರು ಈ ಕುಂಭದ್ರೋಣ ಮಳೆಯಿಂದಾಗಿ ಬೇಸತ್ತಿದ್ದಾರೆ.