ಕರ್ನಾಟಕ

karnataka

ನನ್ನನ್ನು ಅವಮಾನಿಸುವುದು ಇಡಿ ಉದ್ದೇಶ: ಕೇಜ್ರಿವಾಲ್​ - Arvind Kejriwal

By ETV Bharat Karnataka Team

Published : Apr 3, 2024, 8:14 PM IST

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮನ್ನು ಬಂಧಿಸಿದ ಇಡಿ ಕ್ರಮಕ್ಕೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

KEJRIWAL  ARVIND KEJRIWAL BAD HEALTH IN TIHAR  HIGH LOW LEVEL OF SUGAR  TIHAR JAIL MANAGMENT
ಇಡಿ ವಿರುದ್ಧ ಕಿಡಿಕಾರಿದ ಕೇಜ್ರಿವಾಲ್​

ನವದೆಹಲಿ: ದೆಹಲಿ ಸರ್ಕಾರದ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧಿಸಿರುವುದಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ (ಇಡಿ) ಏಕಮಾತ್ರ ಉದ್ದೇಶ ನನ್ನನ್ನು ಅವಮಾನಿಸುವುದಾಗಿದೆ. ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ತಡೆಯುವುದು ಅವರ ಮುಖ್ಯ ಉದ್ದೇಶವಾಗಿದೆ ಎಂದು ಕಿಡಿಕಾರಿದ್ದಾರೆ. ಇಡಿ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಅವರು ಮಧ್ಯಂತರ ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಪೀಠವು ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಿತು. ಕೇಜ್ರಿವಾಲ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ವಿಕ್ರಮ್ ಚೌಧರಿ ವಾದ ಮಂಡಿಸಿದರು.

ದೆಹಲಿ ಮುಖ್ಯಮಂತ್ರಿಯ ಬಂಧನದ ಸಮಯ ಹಲವು ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಅವರು ಹೇಳಿದರು. ಅದರಲ್ಲೂ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈ ಬಂಧನ ನಡೆದಿರುವುದು ದುರದೃಷ್ಟಕರ. ಇಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಹಾಜರಿದ್ದರು. ಈ ಅರ್ಜಿ ಮೇಲಿನ ವಾದ ಪ್ರತಿವಾದಗಳು ಹೈಕೋರ್ಟ್‌ನಲ್ಲಿ ಕೊನೆಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

ಕೇಜ್ರಿವಾಲ್‌ಗೆ ತಿಹಾರ್​ ಜೈಲಿನಲ್ಲಿ ಬೆದರಿಕೆ ಇದೆ ಎಂದು ಅಧಿಕಾರಿಗಳು ಮಾಹಿತಿ ಪಡೆದ ನಂತರ ಹೆಚ್ಚು ಅಲರ್ಟ್ ಆಗಿದ್ದಾರೆ. ಅದೇ ಜೈಲಿನಲ್ಲಿರುವ ಕೆಲವು ಗ್ಯಾಂಗ್‌ಗಳು ತಾವು ಜನಪ್ರಿಯರಾಗಲು ದಾಳಿ ಮಾಡಬಹುದು ಎಂದು ಶಂಕಿಸಲಾಗಿದೆ. ಕೇಜ್ರಿವಾಲ್ ಪ್ರಸ್ತುತ ಜೈಲು ಸಂಖ್ಯೆ-2ನಲ್ಲಿ ಇದ್ದಾರೆ.

ಈ ಹಿಂದೆಯೂ ಇಲ್ಲಿ ಕೊಲೆಗಳು ನಡೆದಿವೆ. 2021ರಲ್ಲಿ ನಡೆದ ಗ್ಯಾಂಗ್ ವಾರ್‌ನಲ್ಲಿ ಶ್ರೀಕಾಂತ್ ರಾಮಸ್ವಾಮಿ ಎಂಬ ಆರೋಪಿ ಹತ್ಯೆಯಾಗಿದ್ದ. 2015ರಲ್ಲಿ ದೆಹಲಿಯ ವಸಂತ ವಿಹಾರ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು ಎಂದು ಜೈಲಿನ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಇತ್ತೀಚೆಗೆ ಜೈಲಿನಲ್ಲಿ 33 ಮೊಬೈಲ್ ಫೋನ್​ಗಳು ಪತ್ತೆಯಾಗಿದ್ದವು.

ಇದನ್ನೂ ಓದಿ:ಅಬಕಾರಿ ಹಗರಣ: ದೆಹಲಿ ಸರ್ಕಾರದ ಮತ್ತೊಬ್ಬ ಸಚಿವನಿಗೆ ಇಡಿ ವಿಚಾರಣೆಗೆ ಬುಲಾವ್​ - Delhi excise policy case

ABOUT THE AUTHOR

...view details