ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಚುನಾವಣಾ ಪ್ರಚಾರದಲ್ಲಿ ಹಾಸನ ಪ್ರಕರಣವನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.
'ಮಹಿಳೆಯರ ಮೇಲೆ ನಡೆಸಿದ ಅಮಾನವೀಯ ಅಪರಾಧಗಳನ್ನು ತಿಳಿದು ನನಗೆ ತೀವ್ರ ಬೇಸರವಾಗಿದೆ. ಆತ ನೂರಾರು ಮಹಿಳೆಯರ ಬದುಕು ನಾಶಪಡಿಸಿ ಈಗ ತಲೆಮರೆಸಿಕೊಂಡಿದ್ದಾನೆ. ಹೀಗಿದ್ದರೂ ಮೋದಿಜಿ ಮೌನವಾಗಿರುವಿರಾ?' ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಇದೇ ವೇಳೆ ಎಕ್ಸ್ ಹ್ಯಾಂಡಲ್ನಲ್ಲಿ ಪ್ರಶ್ನಿಸಿದ್ದಾರೆ.