ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಭಟ್ಕಳದ ಸೋಡಿಗದ್ದೆ ಮಹಾಸತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ, ಶುಭ ಸಂಕೇತ ಎನ್ನುವಂತೆ ದೇವರಿಂದ ಸಿಂಗಾರ ಪ್ರಸಾದವಾಗಿದೆ.
ಡಾ. ಅಂಜಲಿ ನಿಂಬಾಳ್ಕರ್ಗೆ ಸಿಂಗಾರ ಪ್ರಸಾದ ನೀಡಿದ ಸೋಡಿಗದ್ದೆ ಮಹಾಸತಿ - Anjali Nimbalkar
Published : Apr 13, 2024, 1:41 PM IST
ಭಟ್ಕಳದ ಸೋಡಿಗದ್ದೆ ಮಹಾಸತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಡಾ.ಅಂಜಲಿ ನಿಂಬಾಳ್ಕರ್ ಅವರು ವಿಶೇಷ ಪೂಜೆ ಸಲ್ಲಿಸಿದರು.
ಬೆಳಕೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪ್ರಚಾರ ಸಭೆಗೆ ತೆರಳುವ ಪೂರ್ವ ಸೋಡಿಗದ್ದೆ ಮಹಾಸತಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ದೇವರ ದರ್ಶನ ಪಡೆದು ಪ್ರಾರ್ಥಿಸಿಕೊಂಡರು. ಈ ವೇಳೆ ದೇಗುಲದ ಅರ್ಚಕರು ಸಿಂಗಾರವನ್ನೇರಿಸಿ, 'ಡಾ.ಅಂಜಲಿಯವರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಪ್ರಸಾದ ನೀಡಿ ಅವರನ್ನು ಆಶೀರ್ವದಿಸಬೇಕು' ಎಂದು ಪ್ರಾರ್ಥಿಸಿಕೊಂಡರು. ಈ ವೇಳೆ, ದೇವರ ಶಿರಭಾಗದಿಂದ ಸಿಂಗಾರದ ಪ್ರಸಾದವಾಗಿದ್ದು, ನೆರೆದಿದ್ದವರೆಲ್ಲ ಒಮ್ಮೆ ರೋಮಾಂಚನಗೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಅವರ ಪತ್ನಿ, ಮಗಳು ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಇದ್ದರು.
ಓದಿ:ಲೋಕಸಭೆ ಚುನಾವಣೆಯಲ್ಲಿ ಎನ್ಡಿಎಗೆ ಬಹುಮತ ಬರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ - Siddaramaiah