ಕರ್ನಾಟಕ

karnataka

ಗುಂಪುಗಾರಿಕೆ, ಕ್ರಾಸ್ ವೋಟಿಂಗ್ ಭಯದಿಂದ ಕಾಂಗ್ರೆಸ್​ ರೆಸಾರ್ಟ್ ರಾಜಕಾರಣ ಮಾಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

By ETV Bharat Karnataka Team

Published : Feb 25, 2024, 8:30 PM IST

ರಾಜ್ಯಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್​ನಲ್ಲಿರುವ ಗುಂಪುಗಾರಿಕೆ ಪರಿಣಾಮ ಬಿರುವ ಸಾಧ್ಯತೆಯಿಂದ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಹಾವೇರಿ : ಗುಂಪುಗಾರಿಕೆಯಿಂದ ಕ್ರಾಸ್ ವೋಟಿಂಗ್ ಆಗುವ ಭಯದಲ್ಲಿ ಕಾಂಗ್ರೆಸ್​ನವರು ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಸವಣೂರು ತಾಲೂಕಿನ ಗುಂಡೂರು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಬಿಜೆಪಿ ಶಾಸಕರ ಸಂಖ್ಯೆ 66 ಇದ್ದು, ಜೆಡಿಎಸ್​ನಲ್ಲಿ 19 ಶಾಸಕರಿದ್ದಾರೆ. ರಾಜ್ಯಸಭೆಯ ಒಂದು ಸ್ಥಾನಕ್ಕೆ ಬೇಕಾಗುವ ಶಾಸಕರ ಸಂಖ್ಯೆ ಮೀರಿ 40 ಶಾಸಕರ ಸಂಖ್ಯೆ ಹೆಚ್ಚಿದೆ. ಹೀಗಾಗಿಯೇ ಕುಪೇಂದ್ರ ರೆಡ್ಡಿ 5ನೇ ಅಭ್ಯರ್ಥಿ ಆಗಿ ಕಣಕ್ಕಿಳಿದಿದ್ದಾರೆ. ನಾಲ್ಕು ಜನ ಶಾಸಕರು ಇಂಡಿಪೆಂಡೆಂಟ್ ಇದ್ದಾರೆ. ಕಾಂಗ್ರೆಸ್​ನವರಿಗೆ ಮೂವರನ್ನು ಆಯ್ಕೆ ಮಾಡಲು ಯಾವುದೇ ತೊಂದರೆ ಇಲ್ಲ. ಆದರೆ ಅವರಲ್ಲಿ ಗುಂಪುಗಾರಿಕೆ ಇರುವುದು ಬಹಳ ಸ್ಪಷ್ಟವಾಗಿದೆ. ಹೀಗಾಗಿ ಅವರ ಗುಂಪುಗಾರಿಕೆಯಿಂದ ಕ್ರಾಸ್ ವೋಟಿಂಗ್ ಆಗುವ ಭಯದಲ್ಲಿ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್​ ಕೂಡಾ ಅವರ ಪ್ರಭಾವ ಬೀರುತ್ತಿದ್ದಾರೆ. ಆದರೆ ನಮಗೆ ವಿಶ್ವಾಸ ಇದೆ. ಕುಪೇಂದ್ರ ರೆಡ್ಡಿ ಅವರು ಕೂಡಾ ರಾಜ್ಯಸಭೆಗೆ ಆಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವರಿಷ್ಠರು ನಿರ್ಧರಿಸುತ್ತಾರೆ ಎಂದ ಬೊಮ್ಮಾಯಿ: ಲೋಕಸಭಾ ಚುನವಾಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧಿಸುವ ಬಗ್ಗೆ ಕೇಳಿದಾಗ ಹಾವೇರಿ - ಗದಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧಿಸುವ ಬಗ್ಗೆ ನಮ್ಮ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಇನ್ನು ಮುಂಡಗೋಡದಲ್ಲಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸೂಮೋಟೋ ಕೇಸ್ ದಾಖಲಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಇದೇ ವೇಳೆ ಮಾಜಿ ಸಿಎಂ ಬೊಮ್ಮಾಯಿ ತಿಳಿಸಿದರು.

ಸವಣೂರು ತಹಶಿಲ್ದಾರ್ ಕಚೇರಿಯಲ್ಲಿ ರೈತರ ದಾಖಲೆಗಳು ಹಾಳಾದ ವಿಚಾರ ಬಗ್ಗೆ ಮಾತನಾಡಿದ ಬೊಮ್ಮಾಯಿ, ಸವಣೂರು ತಹಶಿಲ್ದಾರರ ಕಚೇರಿಗೆ 2000 ರಲ್ಲಿ ಬೆಂಕಿ ಬಿದ್ದು ತೊಂದರೆ ಆಗಿತ್ತು. ರೈತರಿಗೆ ಪಹಣಿಯಲ್ಲಿ ಹೊಸ ಶರ್ತು, ಹಳೆ ಶರ್ತು ಮಾಡಿಸಲು ತೊಂದರೆ ಆಗಿತ್ತು. ಕಚೇರಿಯಲ್ಲಿ ದಾಖಲೆ ಇಲ್ಲದೆ ಇರುವುದು ತೊಂದರೆ ಆಗಬಹುದು. ಡಿಸಿ ಜೊತೆಗೆ ಮಾತಾಡಿದ್ದೇನೆ. ಬಹಳ ವರ್ಷದಿಂದ ದಾಖಲೆಗಳಿದ್ದು, ಡಿಜಿಟಲೀಕರಣ ಮಾಡುತ್ತೇವೆ ಎಂದು ಸರ್ಕಾರ ಹೇಳಿದೆ. ಈ ರೀತಿ ಮಾಡಿದರೆ ಎಲ್ಲವೂ ಸರಿಯಾಗಲಿದೆ ಎಂದು ಬೊಮ್ಮಾಯಿ ಮಾಹಿತಿ ನೀಡಿದರು.

ಇದನ್ನೂ ಓದಿ :ರಾಜ್ಯಸಭೆ ಮತದಾನದ ವೇಳೆಗೆ ಬರುತ್ತೇನೆ ಎಂದಿದ್ದರು, ವಿಧಿ ಅವರನ್ನು ನಮ್ಮಿಂದ ದೂರ ಮಾಡಿದೆ: ಡಿ ಕೆ ಶಿವಕುಮಾರ್

ABOUT THE AUTHOR

...view details