ಕರ್ನಾಟಕ

karnataka

ರಸ್ತೆ ಮಧ್ಯೆ ನಿಂತ ಕಾಡಾನೆ; ಹೆದರಿ ಪ್ರಪಾತಕ್ಕೆ ವಾಹನ ಇಳಿಸಿದ ಚಾಲಕ - Bolero jeep fall into precipice

By ETV Bharat Karnataka Team

Published : May 13, 2024, 8:23 PM IST

Updated : May 13, 2024, 8:30 PM IST

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ರಸ್ತೆಯ ಮಧ್ಯೆ ನಿಂತಿದ್ದ ಆನೆಯನ್ನು ಕಂಡು ಬೊಲೆರೊ ವಾಹನ ಸವಾರರೊಬ್ಬರು ವಾಹನವನ್ನು ಪ್ರಪಾತಕ್ಕೆ ಇಳಿಸಿದ್ದಾರೆ.

BOLERO JEEP
ಬೊಲೆರೊ ವಾಹನ (ETV Bharat)

ಚಿಕ್ಕಮಗಳೂರು :ರಸ್ತೆಯಲ್ಲಿ ಮಂಜಿನ ಮಧ್ಯೆ ನಿಂತಿದ್ದ ಆನೆ ಕಂಡು ಹೆದರಿದ ಬೊಲೆರೊ ವಾಹನ ಸವಾರರೊಬ್ಬರು ಪ್ರಪಾತಕ್ಕೆ ವಾಹನ ಇಳಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಆನೆ ಕಾಡಿನತ್ತ ತೆರಳಿದ ಬಳಿಕ ವಾಹನ ಸಂಚಾರ ಸುಗಮವಾಗಿದೆ. ಚಾರ್ಮಾಡಿ ಘಾಟಿಯ 8-9ನೇ ತಿರುವಿನ ಮಧ್ಯೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಮಂಜು ಆವರಿಸಿದ್ದ ಹಿನ್ನೆಲೆ ಆನೆ ಹತ್ತಿರ ಬರುತ್ತಿರುವಂತೆ ಕಾಣಿಸಿದ್ದರಿಂದ ವಾಹನ ಸವಾರ ಭಯಗೊಂಡಿದ್ದಾರೆ.

ಚಿಕ್ಕಮಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಕಳೆದ 15 ದಿನಗಳಿಂದ ಆನೆ ಸಂಚಾರ ನಿರಂತರವಾಗಿ ಕಂಡುಬರುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಜರುಗಿಸದೇ ಆನೆಯನ್ನು ಕೂಡ ಬೇರೆ ಕಡೆ ಸ್ಥಳಾಂತರ ಮಾಡದೇ ಇಲ್ಲಿಗೆ ಬಿಟ್ಟಿದ್ದಾರೆ. ಇದರಿಂದ ನಿತ್ಯ ರಸ್ತೆಯಲ್ಲಿ ಸಂಚಾರ ಮಾಡುವ ಸವಾರರಿಗೆ ಕಿರಿಕಿರಿಯಾಗುತ್ತಿದ್ದು, ಕೂಡಲೇ ಈ ಸಮಸ್ಯೆಗೆ ಸರಿಯಾದ ಕ್ರಮ ಜರುಗಿಸಬೇಕೆಂದು ವಾಹನ ಸವಾರರು ಆಗ್ರಹಿಸಿದ್ದಾರೆ.

ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮಲೆನಾಡು ಭಾಗದಲ್ಲಿ ಮುಂಜಾನೆ ಹಾಗೂ ಸಂಜೆ ವೇಳೆ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಇದರ ನಡುವೆ ಏಕಾಏಕಿ ಚಾರ್ಮಾಡಿ ರಸ್ತೆ ಮಧ್ಯೆ ಕಾಡಾನೆ ನಿಂತಿದ್ದನ್ನು ಕಂಡು ವಾಹನ ಸವಾರರು ಆತಂಕಕ್ಕೆ ಒಳಗಾಗುತ್ತಿದ್ದಾರೆ.

ಟಿಟಿ ವಾಹನ (ETV Bharat)

ವಿದ್ಯುತ್ ಕಂಬಕ್ಕೆ ಟಿಟಿ ವಾಹನ ಡಿಕ್ಕಿ :ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೇಬೈಲು ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಟಿಟಿ ವಾಹನ ಗುದ್ದಿರುವಂತಹ ಘಟನೆ ನಡೆದಿದೆ.

ಟಿಟಿ ವಾಹನ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದೆ. ಅದೃಷ್ಟವಶಾತ್ 9 ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆ ವಿದ್ಯುತ್ ಸ್ಥಗಿತಗೊಂಡಿದೆ. ಹಾಸನದಿಂದ ಶೃಂಗೇರಿ ಕಡೆಗೆ ಪ್ರಯಾಣಿಕರು ತೆರಳುತ್ತಿದ್ದರು ಎಂಬುದು ತಿಳಿದು ಬಂದಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಇದನ್ನೂ ಓದಿ :ರಾಜ್ಯದಲ್ಲಿ ಪ್ರತ್ಯೇಕ ಅಪಘಾತ: ನಾಲ್ವರು ಸಾವು.. ಬೆಂಗಳೂರಲ್ಲಿ ಕಾರು ಜಖಂಗೊಳಿಸಿದ ರೌಡಿಶೀಟರ್

Last Updated : May 13, 2024, 8:30 PM IST

ABOUT THE AUTHOR

...view details