ಹಾವೇರಿ:ಸಿದ್ದರಾಮಯ್ಯಗೆ ಎನ್ಡಿಎ ವಿರುದ್ಧ ಮಾತನಾಡುವುದಕ್ಕೆ ವಿಷಯಗಳಿಲ್ಲ. ಹೀಗಾಗಿ ಪದೇ ಪದೆ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿ ರಾಜಕೀಯ ಭಯ ಹುಟ್ಟಿಸುತ್ತಿದ್ದಾರೆ ಎಂದು ಮಾಜಿ ಸಿಎಂ, ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಜಿಲ್ಲೆಯ ಸವಣೂರು ತಾಲೂಕಿನ ಕಳಸೂರಲ್ಲಿಂದು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿದ್ದರಾಮಯ್ಯ ಕಳೆದ ಬಾರಿಯೂ ಅವರು ಇದನ್ನೇ ಮಾತನಾಡಿದ್ದರು. ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಆಗುವುದಿಲ್ಲ. ಅಂಬೇಡ್ಕರ್ ಅವರು ಇದ್ದರೂ ಸಂವಿಧಾನ ಬದಲಾವಣೆ ಮಾಡಲು ಆಗುವುದಿಲ್ಲ. ಸುಪ್ರಿಂ ಕೋರ್ಟ್ ಬೆಂಚ್ ಕೂಡ ಹೇಳಿದೆ. ಇದನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.
ಎನ್ಡಿಎ 400 ಕ್ಷೇತ್ರಗಳಲ್ಲಿ ಜಯ ಸಾಧಿಸುತ್ತೆ:ಈ ಬಾರಿ ಬಿಜೆಪಿ ಅಥವಾ ಎನ್ಡಿಎ ಮೈತ್ರಿ ಕೂಟ 200 ಕ್ಷೇತ್ರಗಳಲ್ಲಿ ಜಯ ಗಳಿಸುವುದಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಮಾತನಾಡಿ, ಸಿದ್ದರಾಮಯ್ಯ ಎಲೆಯಲ್ಲಿ ಕತ್ತೆ ಬಿದ್ದಿದೆ. ಅವರು ಅಧಿಕಾರಕ್ಕೆ ಬರಲು 272 ಕ್ಷೇತ್ರಗಳನ್ನು ಗೆಲ್ಲಬೇಕು. ಆದರೆ ಅವರು ಕಾಂಗ್ರೆಸ್ ಸ್ಪರ್ಧಿಸಿದ್ದು ಬರೀ 230 ಕ್ಷೇತ್ರಗಳಲ್ಲಿ'' ಎಂದು ತಿರುಗೇಟು ಕೊಟ್ಟರು.